Wednesday, May 1, 2024
Homeರಾಷ್ಟ್ರೀಯಶಂಕಿತ 8 ಉಗ್ರರ ವಿರುದ್ಧ ಎನ್‍ಐಎ ಚಾರ್ಜ್‍ಶೀಟ್

ಶಂಕಿತ 8 ಉಗ್ರರ ವಿರುದ್ಧ ಎನ್‍ಐಎ ಚಾರ್ಜ್‍ಶೀಟ್

ನವದೆಹಲಿ,ಜ.13- ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿದ್ವಂಸಕ ಕೃತ್ಯ ಎಸಗಲು ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತು ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ದೆಹಲಿ ಕೋರ್ಟ್‍ಗೆ ದೋಷಾರೋಪ ಪಟ್ಟಿಯನ್ನು ದೆಹಲಿ ಕೋರ್ಟ್‍ಗೆ ಸಲ್ಲಿಸಿದ್ದು, ಶಂಕಿತ ಉಗ್ರರರಾದ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಎಂಬುವವರನ್ನು ಕಳೆದ ವರ್ಷ ಜುಲೈ 19ರಂದು ಎನ್‍ಐಎ ತಂಡ ಬಂಧಿಸಿದೆ.

ಇವರ ಹೆಸರುಗಳನ್ನು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿದ್ದು, ಇವರೆಲ್ಲರ ವಿರುದ್ಧ ಐಪಿಸಿ, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ, ಸ್ಪೋಟಕಗಳ ಸಾಗಣೆಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 8 ಮಂದಿಯಲ್ಲಿ 6 ಮಂದಿಯನ್ನು ಬಂಧಿಸಲಾಗಿದ್ದು, ಇನ್ನೂ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇವರ ವಿರುದ್ಧ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಆರೋಪವಿದೆ.

ಆರೋಪಿಗಳು ಯುವಕರ ಬ್ರೇನ್‍ವಾಶ್ ಮಾಡಿ ಉಗ್ರ ಸಂಘಟನೆಗಳಿಗೆ ಸೇರಿಸುತ್ತಿದ್ದರು. ಅಕ್ರಮವಾಗಿ ಉಗ್ರ ಸಂಘಟನೆಗಳಿಗೆ ಹಣ ರವಾನೆ ಮಾಡುತ್ತಿದ್ದರು ಎಂಬುದು ದೃಢಪಟ್ಟಿದ್ದರಿಂದ ಹೆಚ್ಚಿನ ತನಿಖೆಯನ್ನು ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿ ಕೇರಳ ಮೂಲದ ನಸೀರ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಇಬ್ಬರು ಉಗ್ರರಾದ ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.

ರಾಮಮಂದಿರ ಉದ್ಘಾಟನೆ ಬಹಿಷ್ಕರಿಸಿರುವುದು ಧರ್ಮಕ್ಕೆ ಧಕ್ಕೆ ತರುವ ಉದ್ದೇಶದಿಂದಲ್ಲ : ಖರ್ಗೆ

ಬೆಂಗಳೂರಿನಲ್ಲಿ ಸ್ಪೋಟ ಕೃತ್ಯ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಸುಳಿವು ಸಿಕ್ಕ ಕಾರಣ 2023ರ ಜು.18ರಂದು ಬೆಂಗಳೂರು ಪೋಲೀಸರು ಪ್ರಕರಣ ದಾಖಲಿಸಿದ್ದರು. ದಾಳಿ ವೇಳೆ ನಾಡಪಿಸ್ತೂಲ್, ಜೀವಂತ ಗುಂಡುಗಳು, ವಾಕಿಟಾಕಿ, ಡ್ರ್ಯಾಗರ್ ಮೊಬೈಲ್‍ಗಳು ಜಪ್ತಿಯಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ಜು.18ರಂದು ದಾಳಿ ನಡೆಸಿದ ಪೊಲೀಸರು ಐವರು ಶಂಕಿತ ಲಷ್ಕರ್ ಉಗ್ರರನ್ನು ಬಂಧಿಸಿದ್ದರು. ಶಂಕಿತರ ಬಂಧನದ ವೇಳೆ ಅವರಿಂದ 7 ನಾಡ ಪಿಸ್ತೂಲುಗಳು, 45 ಜೀವಂತ ಗುಂಡುಗಳು, ವಾಕಿಟಾಕಿಗಳು, ಡ್ಯಾಗರ್ಗಳು ಮತ್ತು 12 ಮೊಬೈಲ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ನಂತರ ಈ ಪ್ರಕರಣವನ್ನು 2023ರ ಅಕ್ಟೋಬರ್‍ನಲ್ಲಿ ಎನ್‍ಐಎ ತನಿಖೆಗೆ ವಹಿಸಿಕೊಂಡಿತ್ತು. ಈ ಉಗ್ರರು ಅನ್ಯ ಕೇಸಿನಲ್ಲಿ ಬಂಧಿತರಾಗಿದ್ದಾಗ 2017ರಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟಾಗಿ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದರು. ಬಳಿಕ 7 ಮಂದಿ ಜೈಲಿಂದ ಬಿಡುಗಡೆ ಆಗಿದ್ದರು. ನಂತರ ಜೈಲಿನಲ್ಲೇ ಇದ್ದ ನಸೀರ್ಗೆ ಅನ್ಯ ಪ್ರಕರಣದಲ್ಲಿ ಶಿಕ್ಷೆಯಾದರೇ, ಇಬ್ಬರು ಪರಾರಿಯಾಗಿದ್ದರು. ಮೂವರು ಕಳೆದ ವರ್ಷ ಜು.18ರಂದು ಮತ್ತೆ ಬಂಧಿತರಾಗಿದ್ದರು.

ಇವರು ಯುವಕರ ಬ್ರೈನ್ವಾಶ್ ಮಾಡಿ ಉಗ್ರ ಸಂಘಟನೆಗಳಿಗೆ ಸೇರಿಸುತ್ತಿದ್ದರು. ಅಕ್ರಮವಾಗಿ ಉಗ್ರ ಸಂಘಟನೆಗಳಿಗೆ ಹಣ ರವಾನೆ ಮಾಡುತ್ತಿದ್ದರು ಎಂದು ಪತ್ತೆ ಆಗಿತ್ತು.

RELATED ARTICLES

Latest News