Sunday, May 5, 2024
Homeರಾಷ್ಟ್ರೀಯಮಧ್ಯಪ್ರದೇಶ ಹಾಳು ರಾಜ್ಯವಾಗಿದೆ ; ಕಮಲ್‍ನಾಥ್

ಮಧ್ಯಪ್ರದೇಶ ಹಾಳು ರಾಜ್ಯವಾಗಿದೆ ; ಕಮಲ್‍ನಾಥ್

ಭೋಪಾಲ್,ಸೆ.30- ಉಜ್ಜಯಿನಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಮಧ್ಯಪ್ರದೇಶವನ್ನು ಹಾಳು ರಾಜ್ಯವನ್ನಾಗಿ ಆಗಿ ಪರಿವರ್ತಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

15 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ಅರ್ಚಕರೊಬ್ಬರು ರಕ್ಷಿಸಿದ ಆಘಾತಕಾರಿ ಘಟನೆಯ ನಂತರ ಕಾಂಗ್ರೆಸ್ ನಾಯಕರ ಈ ಹೇಳಿಕೆಗಳು ಬಂದಿವೆ.ರಾಜ್ಯದಲ್ಲಿ ಇಂತಹ ಸಾಕಷ್ಟು ಘಟನೆಗಳು ಗಮನಕ್ಕೆ ಬರುವುದಿಲ್ಲ. ಕೆಲವು ಗಮನಕ್ಕೆ ಬರುತ್ತವೆ. ಆದರೆ ರಾಜ್ಯದಲ್ಲಿ ಇಂತಹ ಸಾಕಷ್ಟು ಘಟನೆಗಳು ನಡೆಯುತ್ತಿವೆ, ಅದರ ಮಾಹಿತಿ ನಮಗೆ ಸಿಗುವುದಿಲ್ಲ. ಆಜ್ ಯೇ ಚೌಪತ್ ಪ್ರದೇಶ್ ಬನ್ ಗಯಾ ಹೈ ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ಇದುವರೆಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಆಟೋರಿಕ್ಷಾ ಚಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಆತನ ವಿರುದ್ಧ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಎರಡನೇ ಆರೋಪಿ ಆಟೋರಿಕ್ಷಾ ಚಾಲಕನ ವಿರುದ್ಧ ಸಾಕ್ಷ್ಯವನ್ನು ಮುಚ್ಚಿಟ್ಟ ಆರೋಪವನ್ನೂ ಹೊರಿಸಲಾಗಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-09-2023)

ಮಧ್ಯಪ್ರದೇಶದ ಉಜ್ಜಯಿನಿಯ ವಿಶೇಷ ನ್ಯಾಯಾಲಯವು ಆಟೋರಿಕ್ಷಾ ಚಾಲಕನನ್ನು ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಪ್ರಮುಖ ಆರೋಪಿಯನ್ನು ಉಜ್ಜಯಿನಿಯಲ್ಲಿರುವ ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆ (ಪೆÇೀಕ್ಸೊ) ಅಡಿಯಲ್ಲಿ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ನಮಗೆ ಮಾಹಿತಿ ಬಂದ ತಕ್ಷಣ, ಹುಡುಗಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು, ಏನಾಯಿತು ಎಂಬುದರ ಕುರಿತು ಹುಡುಗಿ ಪೊಲೀಸರಿಗೆ ತಿಳಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ಸಹಾಯಕ್ಕಾಗಿ ಆಪ್ತಸಮಾಲೋಚಕರನ್ನು ಕರೆಸಲಾಯಿತು. ಸಮಾಲೋಚಕರು ಅವಳೊಂದಿಗೆ ಸಂವಾದ ನಡೆಸಿ ದೃಢಪಡಿಸಿದರು. ಹಲ್ಲೆಯ ಬಗ್ಗೆ ಪೊಲೀಸರಿಗೆ ತಿಳಿಸಲಾಗಿದೆ ಎಂದು ಎಸ್ಪಿ ಶರ್ಮಾ ತಿಳಿಸಿದ್ದಾರೆ.

ವೈದ್ಯಕೀಯ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‍ಐಟಿ) ರಚಿಸಲಾಗಿದೆ. ಪೊಲೀಸರು ತನಿಖೆಯನ್ನು ಪ್ರಾರಂಭಿಸಿದರು ಮತ್ತು ಲಭ್ಯವಿರುವ ಎಲ್ಲಾ ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಿದರು, ಅದರ ಆಧಾರದ ಮೇಲೆ ಆಟೋ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

RELATED ARTICLES

Latest News