ಧಾರವಾಡ, ಜೂನ್ 21-ಜಮೀನು ಖರೀದಿ ವ್ಯವಹಾರದಲ್ಲಿ ಮಾಜಿ ಯೋಧ ಸೇರಿದಂತೆ ಐವರಿಗೆ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ ಧಾರವಾಡ ಉಪ ನೋಂದಣಿ ಕಚೇರಿ ಆವರಣದಲ್ಲಿ ಹಣ ಎಂದು ಪೇಪರ್ ಬಂಡಲ್ ಕೊಟ್ಟು ಮಾಜಿ ಯೋಧ ಸುರೇಶ ತಡಕೋಡ, ಧರ್ಮೇಂದ್ರ ರಾಯನಗೌಡರ ಹಾಗೂ ಸುರೇಶ ಬಳಗೇರಗೆ ನಯವಾಗಿ ವಂಚಿಸಲಾಗಿದೆ. ಧಾರವಾಡ ತಾಲೂಕಿನ ಶಿವಳ್ಳಿಯ ಸುವರ್ಣಾ ಮುದ್ದಿ ಎಂಬುವವರಿಂದ 6 ಎಕರೆ ಜಮೀನು ಖರೀದಿಗೆ ಮುಂದಾಗಿ, 2023ರಲ್ಲಿ ಇದಕ್ಕೆ ಸಂಬಂಧಿಸಿದಂತೆ ಖರೀದಿ ಒಪ್ಪಂದ ಕೂಡ ಮಾಡಿಕೊಳ್ಳಲಾಗಿತ್ತು.
ಅದರಂತೆ ಒಟ್ಟು 24 ಲಕ್ಷ ರೂಪಾಯಿ ಸುವರ್ಣಾ ಮುದ್ದಿ ಕೊಟ್ಟು ಕರಾರು ಮಾಡಲಾಗಿತ್ತು. ಆದರೆ ದಿನ ಕಳೆದಂತೆ ಜಮೀನು ದರ ಹೆಚ್ಚಾಗಿದ್ದರಿಂದ ಸುವರ್ಣಾ ಮುದ್ದಿ ಜಮೀನು ಮಾರಲು ಹಿಂದೇಟು ಹಾಕಿದ್ದು, ಖರೀದಿ ಒಪ್ಪಂದ ರದ್ದು ಮಾಡಿಕೊಳ್ಳೋಣ ಎಂದು ಹೇಳಿದಾಗ ಎಲ್ಲರೂ ಒಪ್ಪಿದರು.
ಹೀಗಾಗಿ, ಐದು ಲಕ್ಷ ರೂಪಾಯಿ ಸಹ ಮರಳಿ ಕೊಟ್ಟು, ಉಳಿದ 19 ಲಕ್ಷ ರೂಪಾಯಿ ಒಪ್ಪಂದ ರದ್ದತಿಗೆ ಸಹಿಯಾದ ಬಳಿಕ ಕೊಡುವ ಮಾತಾಗಿತ್ತು. ಅದರಂತೆ ಸುವರ್ಣಾ ಮುದ್ದಿ, ಮಗಳು ದಾನೇಶ್ವರಿ ಧಾರವಾಡ ಉಪನೋಂದಣಿ ಕಚೇರಿಗೆ ಬಂದಿದ್ದರು.
ಈ ವೇಳೆ ಇವರಿಗೆ ಹಣ ತೋರಿಸಿ, ಸಹಿ ಮಾಡಿದ ಮೇಲೆ ಹಣದ ಬಂಡಲ್ ಕೊಡುವುದಾಗಿ ಹೇಳಿದ್ದಾರೆ.ಅದರಂತೆ ಸಹಿ ಮಾಡಿ ಹೊರಗೆ ಬಂದಾಗ, ಹಣದ ಬಂಡಲ್ ಸಹ ಕೊಟ್ಟಿದ್ದಾರೆ.
ಅಧನ್ನು ತೆಗೆದುಕೊಂಡು ಸುರೇಶ ತಡಕೋಡ, ಧರ್ಮೇಂದ್ರ ಕಾರಿನಲ್ಲಿ ಬಂದು ಹಣದ ಬಂಡಲ್ ತೆಗೆದು ನೋಡಿದಾಗ ಶಾಕ್ ಆಗಿದೆ ಅದರಲ್ಲಿ 1 ಲಕ್ಷ 20 ಸಾವಿರ ಹಣ ಇದ್ದು ಉಳಿದೆಲ್ಲವೂ ಹಾಳೆಗಳನ್ನು ನೋಟಿನಂತೆ ಕಟ್ ಮಾಡಿ ಬಂಡಲ್ ನೀಡಿ ಮೋಸ ಮಾಡಲಾಗಿದೆ.
ಸುರೇಶ ತಡಕೋಡ ಮತ್ತು ತಂಡದ ಆರೋಪವಾಗಿಎರಡು ಕಡೆಯ ಪಾರ್ಟಿಗಳು ಉಪ ನೋಂದಣಿ ಕಚೇರಿಗೆ ಬಂದಾಗ, ಮುದ್ದಿ ಮನೆಯವರು ಹಣದ ಬಂಡಲ್ ಗಳನ್ನು ಇವರಿಗೆ ತೋರಿಸಿದ್ದಾರೆ. ಅದರಲ್ಲಿ ಒಂದಷ್ಟು ಹಣ ಇರೋದನ್ನೇ ತೋರಿಸಿದ್ದಾರೆ. ಮೊದಲು ಸಹಿ ಮಾಡಿ ಬರೋಣ. ಆ ಬಳಿಕ ಹಣವನ್ನು ಕೊಡುತ್ತೇವೆ ಅಂತಾನೂ ಹೇಳಿದ್ದಾರೆ.
ಹೀಗಾಗಿ, ಖರೀದಿ ಒಪ್ಪಂದ ರದ್ದತಿ ದಾಖಲೆಗಳಿಗೆ ಸಹಿ ಮಾಡಿ ಹೊರಗೆ ಬಂದಿದ್ದಾರೆ. ಆಗ ದಾನೇಶ್ವರಿ ಮುದ್ದಿ, ವಾಶ್ ರೂಮ್ಗೆ ಹೋಗಿ ಬರುವುದಾಗಿ ಕೆಲ ಹೊತ್ತು ಹೋಗಿ ಮರಳಿ ಬಂದಿದ್ದಾರೆ. ಮೊದಲು ತೋರಿಸಿದ್ದ ಬ್ಯಾಗ್ನಿಂದಲೇ ಹಣದ ಬಂಡಲ್ಗಳನ್ನು ತೆಗೆದು ಕೊಟ್ಟಿದ್ದಾರೆ. ಇವರು ಅವುಗಳನ್ನು ಕಾರಿನಲ್ಲಿ ಇಟ್ಟು, ಓಪನ್ ಮಾಡಿ ನೋಡುತ್ತಿದ್ದಂತೆಯೇ ಹಣದ ಬದಲಿಗೆ ಪೇಪರ್ ಹಾಳೆಗಳು ಇರುವುದು ಗೊತ್ತಾಗಿದೆ. ಆ ಕ್ಷಣವೇ ಮುದ್ದಿ ಕುಟುಂಬದವರು ಅಲ್ಲಿಂದ ಪರಾರಿಯಾಗಿದ್ದಾರೆ. ಸದ್ಯ ಉಪನಗರ ಠಾಣೆಯಲ್ಲಿ ವಂಚನೆಯ ಪ್ರಕರಣ ದಾಖಲಾಗಿದೆ.
- ನನಗೆ ಯಾವ ಅಧಿಕಾರವೂ ಬೇಡ, ಐಶ್ವರ್ಯವೂ ಬೇಡ, ಜನ ಪ್ರೀತಿ ಸಾಕು : ಕೆ.ಎನ್. ರಾಜಣ್ಣ
- ಅಕ್ರಮ ಗಣಿಗಾರಿಕೆ : ಸಿಎಂಗೆ ಸಚಿವ ಎಚ್.ಕೆ.ಪಾಟೀಲ್ ಪತ್ರ
- ಜು.1 ರಿಂದ ಅವಧಿ ಮೀರಿದ ವಾಹನಗಳಿಗೆ ದೆಹಲಿಯಲ್ಲಿ ಸಿಗಲ್ಲ ಇಂಧನ
- ಮದ್ಯ ಮಾರಾಟದ ಲೈಸೆನ್ಸ್ ನವೀಕರಣ ಶುಲ್ಕ ಹೆಚ್ಚಳ ವಾಪಸ್ಸಿಗೆ ಆಗ್ರಹ
- ಪಾಕಿಸ್ತಾನಕ್ಕೆ ಮತ್ತೊಮ್ಮೆ ರಾಜನಾಥ್ಸಿಂಗ್ ನೇರ ಎಚ್ಚರಿಕೆ