ಬೆಂಗಳೂರು : ಕರ್ನಾಟಕ ಜವಳಿ ಮತ್ತು ಕೈಮಗ್ಗ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚೇತನ ಗೌಡರವರಿಗೆ ಭಾರತೀಯ ಯುವ ಕಾಂಗ್ರೆಸ್ಸಿನ ರಾಷ್ಟ್ರೀಯ ವಕ್ತಾರರು ಹಾಗು ಕೆಪಿಸಿಸಿ ನೀತಿ, ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ಶ್ರೀ ಆದರ್ಶ ಹುಂಚದಕಟ್ಟೆ ಅವರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಯುವ ಕಾಂಗ್ರೆಸ್ಸಿನ ಮಾಜಿ ರಾಷ್ಟ್ರಾಧ್ಯಕ್ಷರಾದ ಶ್ರೀನಿವಾಸ್ ಬಿ.ವಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮಧುಸೂಧನ್ ಸಿ,ಜಿ ತೀರ್ಥಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪೂರ್ಣೇಶ್ ಕೆಳಕೆರೆ, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ ಹಾಗು ಶ್ರಂಗೇರಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ದುರ್ಗಾ ಚರಣ್ ಗೌಡ ಜೊತೆಗಿದ್ದರು.