ಚಿಕ್ಕಮಗಳೂರು, ಜೂ.25– ಸಮವಸ್ತ್ರ ಇಲ್ಲ ಎಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತರಿಕೆರೆ ತಾಲೂಕಿನಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ.
ನಂದಿತಾ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಶಾಲೆಯಲ್ಲಿ ಸಮವಸ್ತ್ರ ಧರಿಸದ ಹಿನ್ನಲೆ ಶಿಕ್ಷಕರು ಪ್ರಶ್ನಿಸಿದ್ದರು ಎನ್ನಲಾಗಿದೆ.
ಎರಡು ವರ್ಷ ಶಾಲೆ ಬಿಟ್ಟಿದ್ದ ವಿದ್ಯಾರ್ಥಿನಿ ಬಳಿ ಹಳೇ ಡ್ರೆಸ್ ಕೂಡ ಇರಲಿಲ್ಲ ಎನ್ನಲಾಗಿದೆ. ಮನೆಗೆ ಬಂದು ಪೋಷಕರ ಬಳಿ ಯೂನಿಫಾರಂ ಕೇಳಿದ್ದು, ಎರಡು ದಿನದಲ್ಲಿ ಕೊಡಿಸುತ್ತೇನೆ ಎಂದು ಬಾಲಕಿ ತಂದೆ ಹೇಳಿದ್ದರು.
ಯೂನಿಫಾರಂ ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಬಳ್ಳಾರಿ ಕಾರ್ಪೋರೇಟರ್ ಮನೆ ಮೇಲೆ ಸಿಬಿಐ ದಾಳಿ
- ದೇಶದಲ್ಲಿ ಅಸಹನೆ, ಧರ್ಮಾಂಧತೆ ಹೆಚ್ಚಾಗಿದೆ : ಸಚಿವ ಎಚ್.ಸಿ.ಮಹದೇವಪ್ಪ ಬೇಸರ
- ಭವಿಷ್ಯವಾಣಿಗಳನ್ನು ಮೀರಿಸಿ ಭಾರತ ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಯುತ್ತಿದೆ : ಭಾಗವತ್
- ಈ ಬಾರಿ ಶಿಕ್ಷಕರಿಗಿಲ್ಲ ದಸರಾ ರಜೆ
- ಅಂಬರೀಷ್ಗೂ ‘ಕರ್ನಾಟಕ ರತ್ನ’ ನೀಡುವಂತೆ ನಟಿ ತಾರಾ ಆಗ್ರಹ