
ಚಿಕ್ಕಮಗಳೂರು, ಜು.14- ಪ್ರವಾಸಕ್ಕೆ ಬಂದಿದ್ದ ಟೆಕ್ಕಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಅಕ್ಷಯ ನಗರ ನಿವಾಸಿ ರಾಹುಲ್(29) ಮೃತ ದುರ್ದೈವಿ. ಈತ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಈತ ತನ್ನ ಸ್ನೇಹಿತರೊಂದಿಗೆೆ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದು, ನಗರದ ಹೊರವಲಯದ ಹೋಂ ಸ್ಟೇಯಲ್ಲಿ ವಾಸ್ತವ್ಯ ಹೂ ಡಿದ್ದರು. ರೂಂನಲ್ಲಿದ್ದ ವೇಳೆ ಇದ್ದಕ್ಕಿದ್ದ ಹಾಗೇ ರಾಹುಲ್ ಕುಸಿದು ಬಿದ್ದರು.
ಆತನನ್ನು ಕೂಡಲೇ ಸ್ನೇಹಿತರು ಆಸ್ಪತ್ರೆಗೆ ಕರೆದೋಯ್ದರಾದರೂ ಮಾರ್ಗಮಧ್ಯದಲ್ಲೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ.
- ಸಚಿವರು, ಶಾಸಕರ ಜತೆ ಸುರ್ಜೆವಾಲ ಮತ್ತೆ ಸಭೆ
- ಗ್ಯಾರಂಟಿ ಸರ್ಕಾರದಿಂದ ಶಕ್ತಿಯೋಜನೆ ಯಶಸ್ಸಿನ ಸಂಭ್ರಮಾಚರಣೆ, ಖುದ್ದು ಉಚಿತ ಟಿಕೆಟ್ ವಿತರಿಸಿದ ಸಿಎಂ
- ಸಿಗಂದೂರು ಸೇತುವೆ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ : ಸಿಎಂ ಸಿದ್ದರಾಮಯ್ಯ ಅಸಮಾಧಾನ
- ಸಿಗಂಧೂರಿಗೆ ಸಂಪರ್ಕ ಕಲ್ಪಿಸುವ ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಲೋಕಾರ್ಪಣೆ
- ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಯತ್ತ ಶುಭಾಂಶು ಶುಕ್ಲಾ ಪ್ರಯಾಣ ಆರಂಭ