ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ಥಳ ಮಂಜೂರು

Social Share

ಬೆಂಗಳೂರು ಫೆ.7- ಕೇಂದ್ರ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿದ 15 ವರ್ಷಗಳ ಬಳಿಕ ಮೈಸೂರಿನ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಶಾಶ್ವತ ಸ್ಥಳವನ್ನು ಮಂಜೂರು ಮಾಡಲು ನಿರ್ಧರಿಸಿದೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿರುವ ಜಯಲಕ್ಷ್ಮೀ ವಿಲಾಸ ಭವನಕ್ಕೆ ಕೇಂದ್ರವನ್ನು ಸ್ಥಳಾಂತರಿಸಲಾಗುತ್ತದೆ.

ಮೈಸೂರು ವಿಶ್ವವಿದ್ಯಾನಿಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡುವಿನ ತಿಳುವಳಿಕೆ ಒಪ್ಪಂದದ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಮತ್ತೆ ರೆಪೊ ದರ ಏರಿಸಿದ ಆರ್‌ಬಿಐ, ಹೆಚ್ಚಾಗಲಿದೆ ಬ್ಯಾಂಕ್ ಬಡ್ಡಿ

ಕೇಂದ್ರವು ಪೂರ್ಣ ಪ್ರಮಾಣದ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಸೆಂಟ್ರಲ್ ಇನ್‍ಸ್ಟಿಟ್ಯೂಟ್ ಆಫ್ ಕ್ಲಾಸಿಕಲ್ ತಮಿಳಿನ ಮಾದರಿಯಲ್ಲಿ ಕೇಂದ್ರಕ್ಕೆ ಹೆಚ್ಚು ವಿಶಾಲವಾದ ಸ್ಥಳ, ಹೆಚ್ಚಿನ ನಿಗಳು, ಸಿಬ್ಬಂದಿ ಮತ್ತು ಸ್ವಾಯತ್ತ ಸ್ಥಾನಮಾನದ ಅಗತ್ಯವಿದೆ. ಸದ್ಯಕ್ಕೆ ಇರುವ ಸ್ಥಳದಲ್ಲೇ ಕಾರ್ಯಾರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.

ಸೌಲಭ್ಯಗಳ ಕೊರತೆಯಿಂದ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ನಿರ್ದಿಷ್ಟ ಪ್ರಗತಿಯನ್ನು ಸಾಸಲು ಸಾಧ್ಯವಾಗಿಲ್ಲ. ಕೇಂದ್ರವು ಸೆಂಟ್ರಲ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯನ್ ಲ್ಯಾಂಗ್ವೇಜಸ್ (ಸಿಐಐಎಲ್), ಮೈಸೂರಿನ ಭಾಗವಾಗಿರುವುದರಿಂದ ತಾಂತ್ರಿಕ ಸಮಸ್ಯೆಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಾರ್ಷಿಕವಾಗಿ ಪಡೆಯುವ 1 ಕೋಟಿ ನಿಧಿಯಲ್ಲಿ ಕನಿಷ್ಠ 25%ರಿಂದ 30%ರಷ್ಟು ಕಡಿಮೆ ಬಳಕೆಗೆ ಕಾರಣವಾಗಿವೆ.

ಸರ್ಕಾರಿ ಖರ್ಚಿನಲ್ಲಿ ಹಿಂದುತ್ವದ ಶಂಖನಾದ ಊದಿದರೆ ಸುನಿಲ್ ಕುಮಾರ್?

ಕೇಂದ್ರವು ಒಂಬತ್ತು ಪುಸ್ತಕಗಳನ್ನು ಹೊರತಂದಿದ್ದು, ಅವು ಇನ್ನೂ ಮುದ್ರಣಗೊಳ್ಳಬೇಕಿದೆ. ಕಟ್ಟಡ ಸೌಲಭ್ಯಗಳು ಮತ್ತು ಶಾಸ್ತ್ರೀಯ ಕನ್ನಡದಲ್ಲಿ ಸಂಶೋಧನೆ ನಡೆಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.
ಕೇಂದ್ರಕ್ಕೆ ಸ್ವಾಯತ್ತ ಸ್ಥಾನಮಾನವನ್ನು ನೀಡುವ ಮೂಲಕ ಶಾಸ್ತ್ರೀಯ ಕನ್ನಡದಲ್ಲಿ ಸಂಶೋಧನೆಗೆ ಉತ್ತೇಜನ ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಬದ್ಧತೆಯನ್ನು ತೋರಿಸಲು ಇದು ಸೂಕ್ತ ಸಮಯ ಎಂಬುದು ಬಹುತೇಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕೇಂದ್ರ ಸ್ವಾಯತ್ತ ಸ್ಥಾನಮಾನ ಪಡೆಯಲು ಯುವಕರು ಚಳವಳಿಯನ್ನು ಮುನ್ನಡೆಸಬೇಕು. ನಿಯೋಗವು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮಂಡಿಸಬೇಕಿದೆ. ಸಂಸ್ಥೆಯು 2020ರಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯನ್ನು ಸ್ವಾಯತ್ತ ಸಂಸ್ಥೆಯಾಗಿ ವರ್ಗೀಕರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಾಗಿದೆ.

Kannada Classical, Language, Research, Centre, building, Mysuru,

Articles You Might Like

Share This Article