Thursday, May 2, 2024
Homeರಾಜ್ಯಮೋಡ ಬಿತ್ತನೆಯಿಂದ ಜನರಿಗೆ ಅನುಕೂಲವಾಗಲಿದೆ : ಡಿಕೆಶಿ

ಮೋಡ ಬಿತ್ತನೆಯಿಂದ ಜನರಿಗೆ ಅನುಕೂಲವಾಗಲಿದೆ : ಡಿಕೆಶಿ

ಬೆಳಗಾವಿ,ಡಿ.8- ಬರಗಾಲದ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ತಾವೂ ಕೂಡ ಸಕಾರಾತ್ಮಕ ನಿಲುವು ಹೊಂದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಶೂನ್ಯ ವೇಳೆಯಲ್ಲಿ ರಾಣೆಬೆನ್ನೂರಿನ ಶಾಸಕ ಪ್ರಕಾಶ್ ಕೋಳಿವಾಡ ವಿಷಯ ಪ್ರಸ್ತಾಪಿಸಿ, ಇಂದಿನಿಂದ ಡಿಸೆಂಬರ್ 11 ರವರೆಗೂ ರಾಜ್ಯದಲ್ಲಿ ಮೋಡಗಳು ಹೆಚ್ಚಾಗಿವೆ. ಮೋಡ ಬಿತ್ತನೆ ಮಾಡಿದರೆ ಒಳ್ಳೆಯ ಫಲಿತಾಂಶ ಬರಲಿದೆ. ಮಳೆಯಾದರೆ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಸುಧಾರಿಸುತ್ತವೆ. ಕಡಿಮೆ ಖರ್ಚಿನಲ್ಲಿ ಮೋಡ ಬಿತ್ತನೆಗೆ ಅವಕಾಶವಿದೆ.

ಈ ನಿಟ್ಟಿನಲ್ಲಿ ತಂತ್ರಜ್ಞರ ಜೊತೆ ತಾವು ಚರ್ಚೆ ಮಾಡಿದ್ದು, ಎಲ್ಲಾ ರೀತಿಯ ಸಿದ್ಧತೆಗಳೂ ಲಭ್ಯ ಇವೆ. ಸರ್ಕಾರ ಇಂದೇ ತೀರ್ಮಾನ ಮಾಡಿದರೆ ಮೋಡ ಬಿತ್ತನೆಯಾಗಲಿದೆ. ಜನರಿಗೆ ಅನುಕೂಲವಾಗಲಿದೆ ಎಂದು ಗಮನ ಸೆಳೆದರು. ಆಡಳಿತ ಪಕ್ಷದ ಶಾಸಕ ಕೋ.ನ.ರೆಡ್ಡಿ ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮೋಡ ಬಿತ್ತನೆಗೆ ಉಪಮುಖ್ಯಮಂತ್ರಿಯವರು ಉತ್ತರಿಸುತ್ತಾರೆ ಎಂದು ಹೇಳಿದರು.

ಸಿಖ್ ಪ್ರತ್ಯೇಕತಾವಾದಿ ಹತ್ಯೆ ಪ್ರಕರಣದ ತನಿಖೆಯಾಗಲೇಬೇಕು : ಅಮೆರಿಕ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಕಾಶ್ ಕೋಳಿವಾಡ ಅವರು ಈ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಮೋಡ ಬಿತ್ತನೆ ಮಾಡುವ ಕಂಪನಿಗಳ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಲು ಕೂಡ ಅವರು ಆಸಕ್ತಿ ತೋರಿಸಿದ್ದಾರೆ. ಜನರಿಗೆ ಒಳ್ಳೆಯದನ್ನ ಮಾಡಬೇಕೆನ್ನುವ ಅವರ ಆಸಕ್ತಿ ಶ್ಲಾಘನೀಯ. ನಾನು ಕೂಡ ಮೋಡ ಬಿತ್ತನೆಯ ಪರವಾಗಿದ್ದೇನೆ. ಆದರೆ, ಕೆಲವು ತಾಂತ್ರಿಕ ತೊಂದರೆಗಳಿವೆ.

ಟೆಂಡರ್ ಕರೆಯುವುದೂ ಸೇರಿದಂತೆ ಹಲವಾರು ಪ್ರಕ್ರಿಯೆಗಳನ್ನು ಅನುಸರಿಸಬೇಕು. ಆದರೂ ತಾವು ಹಣಕಾಸು ಇಲಾಖೆಯ ಅಕಾರಿಗಳ ಜೊತೆ ಸಮಾಲೋಚನೆ ನಡೆಸಿ ಯಾವ ರೀತಿ ನೆರವು ನೀಡಬಹುದೆಂಬುದನ್ನು ಪರಿಶೀಲಿಸುತ್ತೇನೆ ಎಂದು ಭರವಸೆ ನೀಡಿದರು.ಮೋಡ ಬಿತ್ತನೆಯನ್ನು ಈಗಾಗಲೇ ಹಲವು ರಾಜ್ಯಗಳು ಜಾರಿಗೊಳಿಸಿವೆ. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕಾಣಸಿಗುವ ಮೋಡಗಳ ಸದ್ಬಳಕೆಗಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಪ್ರಕಾಶ್ ಕೋಳಿವಾಡರವರು ಒಂದು ವೇಳೆ ಸರ್ಕಾರಕ್ಕೆ ನಿರ್ಧಾರ ತೆಗೆದುಕೊಳ್ಳಲು ವಿಳಂಬವಾಗುವುದಾದರೆ ಚಿಂತೆ ಇಲ್ಲ. ನನ್ನ ಸ್ವಂತ ಖರ್ಚಿನಲ್ಲೇ ಮೋಡ ಬಿತ್ತನೆ ಮಾಡಿಸುತ್ತೇನೆ. ಮುಖ್ಯ ಕಾರ್ಯದರ್ಶಿಯವರಿಂದ ಅನುಮತಿ ಕೊಡಿಸಿ ಎಂದು ಮನವಿ ಮಾಡಿದರು.

RELATED ARTICLES

Latest News