ಬಿಬಿಎಂಪಿ ಚುನಾವಣೆ ಮೇಲೆ ಸಿಎಂ-ಡಿಸಿಎಂ ಕಣ್ಣು, ಶಾಸಕರ ಜೊತೆ ಸಮಾಲೋಚನೆ

ಬೆಂಗಳೂರು,ಜೂ.10- ಲೋಕಸಭೆ, ವಿಧಾನಪರಿಷತ್‌ ಸೇರಿದಂತೆ ಎಲ್ಲಾ ಚುನಾವಣೆಗಳನ್ನೂ ಮುಗಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿದ್ದು ಇಂದು ಪಕ್ಷದ ಶಾಸಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ ಮುಖ್ಯಮಂತ್ರಿಯವರ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಬೆಂಗಳೂರಿನ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳಲ್ಲಿನ ಸೋಲಿನ ಬಗ್ಗೆಯೂ ಪರಾಮರ್ಶೆ ನಡೆಯಲಿದೆ. ಈ ಬಾರಿ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಗೆಲ್ಲುವ ವಿಶ್ವಾಸವಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಗರದ ಮತದಾರರು … Continue reading ಬಿಬಿಎಂಪಿ ಚುನಾವಣೆ ಮೇಲೆ ಸಿಎಂ-ಡಿಸಿಎಂ ಕಣ್ಣು, ಶಾಸಕರ ಜೊತೆ ಸಮಾಲೋಚನೆ