ಬೆಂಗಳೂರು,ಜೂ.6– ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತಕ್ಕೆ ಸಂಬಂಧಪಟ್ಟಂತೆ ಜವಾಬ್ದಾರಿಯುತ ಸ್ಥಾನದಲ್ಲಿರುವವರ ವಿರುದ್ಧ ನಮ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳ ಅಮಾನತನ್ನು ಮತ್ತೊಮೆ ಸಮರ್ಥಿಸಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ 43ನೇ ಪುಣ್ಯಸರಣೆ ಅಂಗವಾಗಿ ಪ್ರತಿಮೆ ಬಳಿಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಕೀಯ ಮಾಡುತ್ತಿವೆ. ಆದರೆ ನಾನು ಈ ವಿಷಯದಲ್ಲಿ ರಾಜಕೀಯ ಮಾಡಲು ಬಯಸುವುದಿಲ್ಲ. ಮೇಲ್ನೋಟಕ್ಕೆ ಯಾರು ಜವಾಬ್ದಾರರಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದರು.
ಮುಂದುವರೆದು ಮಾತನಾಡಿದ ಅವರು, ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲೊಬ್ಬರು. ಅವರು ಬಡವರು, ಅನ್ಯಾಯಕ್ಕೆ, ತುಳಿತಕ್ಕೆ ಒಳಗಾದವರ, ಅವಕಾಶ ವಂಚಿತರ ಬಗ್ಗೆ ಅತೀವ ಕಾಳಜಿ ಹೊಂದಿದ್ದರು ಎಂದರು.
ಕರ್ನಾಟಕದಲ್ಲಿ ಬಡತನ ನಿರ್ಮೂಲನಾ ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದರು. ಅವರ ಕಾಲದಲ್ಲಿ ರಾಜಕೀಯವಾಗಿ ಅವಕಾಶವಂಚಿತರನ್ನು ಗುರುತಿಸಿ ಮುನ್ನೆಲೆಗೆ ತರುವ ಪ್ರಯತ್ನ ಮಾಡಿದರು. ಶಾಸಕರು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ವಿಧಾನಸಭೆಗೆ ಕರೆತಂದಿದ್ದರು ಎಂದು ಹೇಳಿದರು.
ಹಾವನೂರು ಆಯೋಗದ ರಚನೆ ಮತ್ತು ಅದರ ವರದಿ ಜಾರಿ ಮಾಡಿ ಹಿಂದುಳಿದ ವರ್ಗಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಿದರು. ಸಾಮಾಜಿಕ ನ್ಯಾಯದಲ್ಲಿ ಬಲವಾದ ನಂಬಿಕೆ ಹೊಂದಿದ್ದರು. ನಿರ್ಗತಿಕರು, ಭೂರಹಿತರು ಅಂತವರಿಗೆ ನ್ಯಾಯ ಕೊಡಿಸಿದ್ದರು ಎಂದರು.
ಉಳುವವನೇ ಭೂಮಿ ಒಡೆಯ ಕಾಯ್ದೆ ಮೂಲಕ ಭೂರಹಿತರನ್ನು ಭೂ ಮಾಲೀಕರನ್ನಾಗಿ ಮಾಡಿದರು. ಜೀತಪದ್ಧತಿ ನಿರ್ಮೂಲನೆ ಮಾಡಿದರು. ಅವರ ಕಾರ್ಯಕ್ರಮಗಳನ್ನು ಹೇಳಲು ಸುದೀರ್ಘ ಸಮಯ ಬೇಕು. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ದೀರ್ಘಕಾಲ ಆಡಳಿತ ನಡೆಸಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು 1973 ರಲ್ಲಿ ನಾಮಕರಣ ಮಾಡಿದ್ದೂ ಕೂಡ ದೇವರಾಜ ಅರಸು ಎಂದು ಸರಿಸಿಕೊಂಡರು.
1956 ರಲ್ಲಿ ಕರ್ನಾಟಕ ಏಕೀಕರಣವಾದರೂ ಕೂಡ ದೇವರಾಜ ಅರಸು 1973 ರಲ್ಲಿ ನಾಮಕರಣ ಮಾಡಬೇಕಾಯಿತು. ಜನಪರ ಕಾಳಜಿ ಇರುವ ಮುತ್ಸದ್ದಿ ರಾಜಕಾರಣಿ ಸಾಮಾಜಿಕ ನ್ಯಾಯದಲ್ಲಿ ಬದ್ಧತೆ ಇದ್ದ ದೇವರಾಜ ಅರಸು ಅವರನ್ನು ಸರ್ಕಾರ 7 ಕೋಟಿ ಕನ್ನಡಿಗರ ಪ್ರತಿನಿಧಿಯಾಗಿ ಸರಿಸಿಕೊಳ್ಳಲಿದೆ ಎಂದು ತಿಳಿಸಿದರು. ದೇವರಾಜ ಅರಸು ಅವರ ಕಾರ್ಯಕ್ರಮಗಳು ನಮಗೆ ಸ್ಫೂರ್ತಿ ಮತ್ತು ಪ್ರೇರಣೆ. ನಮ ಸರ್ಕಾರವೂ ಅವರ ಹಾದಿಯಲ್ಲೇ ಸಾಮಾಜಿಕ ನ್ಯಾಯ ಪಾಲನೆ ಮಾಡುತ್ತದೆ ಎಂದರು.