Saturday, May 4, 2024
Homeರಾಜ್ಯಕರ್ನಾಟಕ ರಾಜ್ಯಕ್ಕೆ 50 ವರ್ಷದ ಸಂಭ್ರಮ : ಲಾಂಛನ ಬಿಡುಗಡೆ

ಕರ್ನಾಟಕ ರಾಜ್ಯಕ್ಕೆ 50 ವರ್ಷದ ಸಂಭ್ರಮ : ಲಾಂಛನ ಬಿಡುಗಡೆ

ಬೆಂಗಳೂರು,ಅ.17- ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನಲೆಯಲ್ಲಿ ಆಚರಿಸಲಾಗುತ್ತಿರುವ ಕರ್ನಾಟಕ ಸಂಭ್ರಮ ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಬಿಡುಗಡೆ ಮಾಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ದೇವರಾಜ್ ಅರಸ್ ಅವರು 50 ವರ್ಷಗಳ ಹಿಂದೆ ಕರ್ನಾಟಕ ಎಂದು ನಾಮಕರಣ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ತಾಯಿ ಜನ್ಮ ನೀಡಿದರೆ, ದೇವರು ಬುದ್ದಿ ಕೊಡುತ್ತಾರೆ, ಗುರುಗಳು ವಿದ್ಯೆ ಕೊಡುತ್ತಾರೆ. ಕನ್ನಡ ನಾಡಿನಲ್ಲಿ ಹುಟ್ಟಿರುವುದೇ ನಮ್ಮ ಪುಣ್ಯ ಎಂದರು.

ಇತಿಹಾಸ ಮರೆತವರಿಂದ ಇತಿಹಾಸ ಸೃಷ್ಟಿಸಲು ಸಾಧ್ಯವಾಗುವುದಿಲ್ಲ. ನಮ್ಮ ಭಾಷೆ ನಮ್ಮ ಹೆಮ್ಮೆ ಎಂದು ಅವರು ಹೇಳಿದರು. ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಚರಿಸುವ ಅವಕಾಶ ದೊರೆತಿರುವುದು ನಮ್ಮ ಪುಣ್ಯ ಎಂದು ಕುವೆಂಪು ಅವರ ಕವನಗಳನ್ನು ಉಪಮುಖ್ಯಮಂತ್ರಿ ವಾಚಿಸಿದರು. ಕನ್ನಡಿಗನಾಗು, ಭಾರತೀಯನಾಗು ವಿಶ್ವ ಮಾನವನಾಗು ಎಂಬ ಕುವೆಂಪು ಅವರ ಸಂದೇಶವನ್ನು ಸಾರುವುದು ಸೇರಿದಂತೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸುವುದಾಗಿ ಅವರು ಹೇಳಿದರು.

ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್‍ಡಿಡಿ

ಇದು ಸರ್ಕಾರದ ಕಾರ್ಯಕ್ರಮವಾಗಬಾರದು. ಜನರ ಕಾರ್ಯಕ್ರಮವಾಗಬೇಕು. ಬೀದರ್‍ನಿಂದ ಚಾಮರಾಜನಗರ ದವರೆಗೂ, ಮಂಗಳೂರಿನಿಂದ ಕೋಲಾರದವರೆಗೂ ಎಲ್ಲ ಮೂಲೆ ಮೂಲೆಗಳಲ್ಲೂ ಸಂಭ್ರಮಾಚರಣೆ ನಡೆಯಲಿದೆ. ಮನೆಗಳ ಮುಂದೆ ರಂಗೋಲಿ ಇಟ್ಟು ಕನ್ನಡ ಜ್ಯೋತಿಯನ್ನು ಬರಮಾಡಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

ಲಾಂಛನ ಸೃಷ್ಟಿಸುವ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಕನ್ನಡ ಸಂಸ್ಕøತಿ ಇಲಾಖೆಯಿಂದ 25 ಸಾವಿರ ರೂ. ಬಹುಮಾನ ನೀಡಲಾಗಿದೆ. ಬಿಬಿಎಂಪಿಯಿಂದ ಒಂದು ಲಕ್ಷ ರೂ. ಬಹುಮಾನ ನೀಡಲು ತೀರ್ಮಾನಿಸಲಾಗಿದೆ. ನಾಡಿನ ಸಂಸ್ಕøತಿ, ಕಲೆಗಳ ಅರಿವು ಮೂಡಿಸಲು ಪ್ರೋತ್ಸಾಹ ನೀಡಬೇಕಿದೆ ಎಂದರು.

ಕನ್ನಡ ಮಾತನಾಡುವ ಅನಿವಾರ್ಯತೆ ಸೃಷ್ಟಿಸಿ
ಬೆಂಗಳೂರು,ಅ.17- ನಾಡಿನಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರು ಕನ್ನಡಿಗರೇ. ಅವರೆಲ್ಲರೂ ಕನ್ನಡ ಮಾತನಾಡುವುದನ್ನು ಕಲಿಯಬೇಕು ಅಂತಹ ವಾತಾವರಣ ಮತ್ತು ಅನಿವಾರ್ಯತೆ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನಲೆಯಲ್ಲಿ ಆಚರಿಸಲಾಗುತ್ತಿರುವ ಕರ್ನಾಟಕ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕರ್ನಾಟಕ ಏಕೀಕರಣವಾದಾಗ ಬೇರೆ ಬೇರೆ ಭಾಷೆ ಮಾತನಾಡುವ ಜನ ಇದ್ದರು. ಅವರ ಮಾತೃ ಭಾಷೆ ತಮಿಳು, ತೆಲುಗು, ಮರಾಠಿ, ಹಿಂದಿ ಮಾತನಾಡುತ್ತಾರೆ. ಕೆಲವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ. ರಾಜ್ಯದಲ್ಲಿ ಇರುವವರೆಲ್ಲ ಕನ್ನಡ ಮಾತನಾಡುವ ಅನಿವಾರ್ಯವನ್ನು ನಾವು ಸೃಷ್ಟಿಸಬೇಕು ಎಂದರು.

ಸಿಎಂ ಇಬ್ರಾಹಿಂಗೆ ಟಾಂಗ್ ಕೊಟ್ಟ ಶರವಣ

ತಮಿಳುನಾಡಿನಲ್ಲಿ ತಮಿಳು, ಉತ್ತರಪ್ರದೇಶದಲ್ಲಿ ಹಿಂದಿ, ಆಂಧ್ರದಲ್ಲಿ ತೆಲುಗು ಮಾತನಾಡಲು ಬರದಿದ್ದರೆ ಅಲ್ಲಿ ಬದುಕಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡವೇ ಬರದೇ ಬದುಕುವವರು ಇದ್ದಾರೆ. ಇದೇ ನಮ್ಮ ಮತ್ತು ಪಕ್ಕದ ರಾಜ್ಯಗಳಿರುವ ವ್ಯತ್ಯಾಸ. ನಾವು ಉದಾರವಾದಿಗಳು ಎಂದರು. ಬೇರೆ ಭಾಷೆಯನ್ನು ಕಲಿಯುವುದು ಬೇಡ ಎನ್ನುವುದಿಲ್ಲ. ಕರ್ನಾಟಕದಲ್ಲಿ ಕನ್ನಡಿಗರು ಕನ್ನಡವನ್ನು ಮಾತನಾಡುವ ಪ್ರವೃತ್ತಿ ಬೆಳೆಸಿಕೊಂಡು ಬೇರೆಯವರೂ ಕನ್ನಡ ಮಾತನಾಡುವ ವಾತಾವರಣ ಸೃಷ್ಟಿಸಬೇಕು ಎಂದು ಹೇಳಿದರು.

RELATED ARTICLES

Latest News