Monday, May 6, 2024
Homeರಾಜ್ಯಮತಗಟ್ಟೆ ಅಧಿಕಾರಿಗಳ ರ್‍ಯಾಂಡಮೈಸೇಷನ್‌ ಮುಕ್ತಾಯ

ಮತಗಟ್ಟೆ ಅಧಿಕಾರಿಗಳ ರ್‍ಯಾಂಡಮೈಸೇಷನ್‌ ಮುಕ್ತಾಯ

ಬೆಂಗಳೂರು, ಏ.24- ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ರ್ಯಾಂಡಮೈಸೇಷನ್ ಇಂದು ನಡೆಸಲಾಯಿತು. ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು.

ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ.

ಅದರಂತೆ, 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43123 ಮತಗಟ್ಟೆ ಅ„ಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಜೊತೆಗೆ 305 ವಲ್ನರಬಲ್ ಹಾಗೂ ಕ್ರಿಟಿಕಲ್ ಮತಗಟ್ಟೆಗಳಿಗಾಗಿ 385 ಮೈಕ್ರೋ ಅಬ್ಸರ್ವರ್ಸ್ ಗಳನ್ನು ನಿಯೋಜನೆ ಮಾಡಲಾಗಿದ್ದು, ಅವರನ್ನು ಕೂಡಾ ರ್ಯಾಂಡಮೈಸೇಷನ್ ಮಾಡಲಾಯಿತು.

ಮತಗಟ್ಟೆ ಅಧಿಕಾರಿಗಳಿಗೆ ಎರಡು ಬಾರಿ ತರಬೇತಿ:
ಲೋಕಸಭಾ ಚುನಾವಣೆಗೆ ನಿಯೋಜಿಸಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಕುರಿತು ಎರಡು ಬಾರಿ ತರಬೇತಿಯನ್ನು ನೀಡಲಾಗಿದೆ.

ಮಸ್ಟರಿಂಗ್ ಸೆಂಟರ್ ಗಳಿಂದ ಮತದಾನ ಸಾಮಗ್ರಿಗಳ ಸಂಗ್ರಹ:
ನಗರದಲ್ಲಿರುವ ಎಲ್ಲಾ 8984 ಮತಗಟ್ಟೆಗಳಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಈ ಸಂಬಂಧ ನಾಳೆ ಎಲ್ಲಾ ಸಿಬ್ಬಂದಿಗಳು ಬೆಳಗ್ಗೆ 9.30ಕ್ಕೆ ಮಸ್ಟರಿಂಗ್ ಕೇಂದ್ರಗಳಿಗೆ ತೆರಳಿ ಮತಗಟ್ಟೆಗಳ ಸಾಮಗ್ರಿಗಳನ್ನು ಸಂಗ್ರಹಿಸಿಕೊಂಡು ಆಯಾ ಚುನಾವಣಾಧಿಕಾರಿಗಳು ವ್ಯವಸ್ಥೆ ಮಾಡಿರುವ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ.

ಈ ವೇಳೆ ಸಾಮಾನ್ಯ ವೀಕ್ಷಕರುಗಳಾದ ಗಾಯತ್ರಿ ರಾಥೋರ್, ವಾಣಿ ಮೋಹನ್, ಮಕರಂದ್ ಪಾಂಡುರಂಗ, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ಕೆ.ಎ ದಯಾನಂದ್ , ವಿನೋತ್ ಪ್ರಿಯಾ, ಸ್ನೆಹಲ್ , ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ , ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅ„ಕಾರಿಯಾದ ಡಿ.ಆರ್ ಅಶೋಕ್ ಇನ್ನಿತರೆ ಸಂಬಂಧಪಟ್ಟ ಅ„ಕಾರಿಗಳು ಉಪಸ್ಥಿತರಿದ್ದರು.

RELATED ARTICLES

Latest News