Monday, January 13, 2025
Homeರಾಷ್ಟ್ರೀಯ | Nationalದಲಿತರು, ಬುಡಕಟ್ಟು ಜನಾಂಗದವರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ : ಮಲ್ಲಿಕಾರ್ಜುನ ಖರ್ಗೆ

ದಲಿತರು, ಬುಡಕಟ್ಟು ಜನಾಂಗದವರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಡಿ 8 (ಪಿಟಿಐ) ದೇಶದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಮೋದಿ ಸರ್ಕಾರವನ್ನು ಗುರಿಯಾಗಿಸಿದ್ದಾರೆ ಮತ್ತು ಇದು ಸಮಾಜವನ್ನು ವಿಭಜಿಸುವ ಬಿಜೆಪಿಯ ಅಜೆಂಡಾದ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‍ಸಿಆರ್‍ಬಿ)ಯ ಇತ್ತೀಚಿನ ವರದಿಯು ಕೇವಲ ಅಂಕಿಅಂಶಗಳಲ್ಲ, ಇದು ಎಸ್‍ಸಿ-ಎಸ್‍ಟಿ ಸಮುದಾಯದ ಜೀವನವನ್ನು ಅಸುರಕ್ಷಿತವಾಗಿಸುವ ಬಿಜೆಪಿಯ ದಾಖಲೆಯಾಗಿದೆ ಎಂದು ಅವರು ಎಕ್ಸ್‍ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.

ಜಾರಿಬಿದ್ದ ಕೆಸಿಆರ್ ಆಸ್ಪತ್ರೆಗೆ ದಾಖಲು, ಚೇತರಿಕೆಗೆ ಮೋದಿ ಹಾರೈಕೆ

ಕಳೆದ ದಶಕದಲ್ಲಿ ಸಮಾಜವನ್ನು ವಿಭಜಿಸುವ ಬಿಜೆಪಿಯ ಷಡ್ಯಂತ್ರದ ಅಜೆಂಡಾದ ಭಾಗವಾಗಿ ಅನ್ಯಾಯ, ದೌರ್ಜನ್ಯ ಮತ್ತು ದಮನವಾಗಿದೆ ಎಂದು ಆರೋಪಿಸಿದರು. ದಲಿತರು ಮತ್ತು ಆದಿವಾಸಿಗಳ ಮೇಲಿನ ನಿರಂತರ ದಬ್ಬಾಳಿಕೆಯು ಬಿಜೆಪಿ-ಆರ್‍ಎಸ್‍ಎಸ್‍ನ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದ್ದಾರೆ.

2013 ರಿಂದ ದಲಿತರ ಮೇಲಿನ ಅಪರಾಧಗಳಲ್ಲಿ ಶೇ. 46.11 ಮತ್ತು ಆದಿವಾಸಿಗಳ ವಿರುದ್ಧ ಶೇ.48.15 ರಷ್ಟು ಹೆಚ್ಚಳವಾಗಿದೆ ಎಂದು ಹೇಳುವ ಪೋಸ್ಟ್ ಅನ್ನು ಖರ್ಗೆ ಹಂಚಿಕೊಂಡಿದ್ದಾರೆ.

RELATED ARTICLES

Latest News