Sunday, September 8, 2024
Homeಸಂಪಾದಕೀಯ-ಲೇಖನಗಳುಬಿಜೆಪಿ – ಜೆಡಿಎಸ್ ಮೈತ್ರಿಯಿಂದ ತಲೆಕೆಳಗಾದ `ಕೈ’ ಲೆಕ್ಕಾಚಾರ

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ತಲೆಕೆಳಗಾದ `ಕೈ’ ಲೆಕ್ಕಾಚಾರ

ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸುವ ಏಕೈಕ ಗುರಿಯೊಂದಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆ ಇದೀಗ ರಾಜಕೀಯ ಲಾಭ, ನಷ್ಟ ಶುರುವಾಗಿದೆ.ವಿಧಾನಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಹೀನಾಯ ಸೋಲು ಕಂಡ ನಂತರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಭರ್ಜರಿ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಮಣಿಸಲು ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದೆ.

ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭವಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ಗೆ ಇದೀಗ ಉಭಯ ಪಕ್ಷಗಳ ಮೈತ್ರಿ ರಾಜಕೀಯ ತಂತ್ರಗಾರಿಕೆಯನ್ನು ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದೆ. ಎರಡೂ ಪಕ್ಷಗಳ ಮೈತ್ರಿಯಿಂದ ನಮಗೇನೂ ನಷ್ಟವಿಲ್ಲ ಎಂದು ನಾಯಕರು ಹೇಳುತ್ತಿದ್ದಾರಾದರೂ ವಾಸ್ತವ ಪರಿಸ್ಥಿತಿ ಮಾತ್ರ ವಿಭಿನ್ನವಾಗಿದೆ. ಹಾಗಾದರೆ ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ಯಾರಿಗೆ ಲಾಭ, ಇನ್ನ್ಯಾರಿಗೆ ನಷ್ಟ ಎಂಬ ಚರ್ಚೆಗಳೂ ಕೂಡ ಮುನ್ನಲೆಗೆ ಬಂದಿದೆ.

ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯಿಂದ ಬಿಜೆಪಿಗಿಂತ ಜೆಡಿಎಸ್ ಗೆ ಹೆಚ್ಚು ಲಾಭ ಎಂಬ ಮಾತುಗಳು ಕೇಳಿಬರುತ್ತಿವೆ. ಲೋಕಸಭೆ ಚುನಾವಣೆಯಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ನಡೆದಿತ್ತು. ಆದರೆ ಇದರಲ್ಲಿ ಜೆಡಿಎಸ್ ಹಾಸನದಲ್ಲಿ ಮಾತ್ರ ಗೆಲುವು ಸಾಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಸೀಟು ಹಂಚಿಕೆ ಇನ್ನೂ ನಿಗದಿಯಾಗಿಲ್ಲ. ಆದರೂ ಹಾಸನ, ಮಂಡ್ಯ, ತುಮಕೂರು, ಕೋಲಾರ ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ ಇಡಬಹುದು. ಹೀಗಾದಲ್ಲಿ ಜೆಡಿಎಸ್ ಹೆಚ್ಚು ಕ್ಷೇತ್ರದಲ್ಲಿ ಗೆಲುವು ಸಾಸಬಹುದು.

ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್ ಗೆ ತನ್ನ ರಾಜಕೀಯ ವ್ಯಾಪ್ತಿಯನ್ನು ಹಿಗ್ಗಿಸಿಕೊಳ್ಳಲು ಅವಕಾಶ ಸಿಗಲಿದೆ. ರಾಷ್ಟ್ರೀಯ ಪಕ್ಷದ ಜೊತೆಗಿನ ಮೈತ್ರಿ ಪಕ್ಷಕ್ಕೂ ಅನುಕೂಲಕರ. ಜೊತೆಗೆ ಕೇಂದ್ರದಲ್ಲಿ ಎನ್ ಡಿಎ ಮತ್ತೆ ಅಧಿಕಾರಕ್ಕೆ ಬಂದಲ್ಲಿ ರಾಜಕೀಯ ಸ್ಥಾನಮಾನಗಳು ಸಿಗುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೀನಾಯವಾಗಿ ಸೋಲು ಅನುಭವಿಸಿದೆ. 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಬೀಗುತ್ತಿದೆ. ಗ್ಯಾರಂಟಿ ಘೋಷಣೆಗಳ ಜಾರಿ ಮೂಲಕ ಲೋಕಸಭೆ ಚುನಾವಣೆಯಲ್ಲೂ ಲಾಭ ಗಳಿಸುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಇಂತಹ ಸಂದರ್ಭಗಳಲ್ಲಿ ಕಾಂಗ್ರೆಸ್ ಕಟ್ಟಿ ಹಾಕಲು ವಿರೋಧ ಪಕ್ಷ ಪ್ರಬಲವಾಗಿರಬೇಕಾಗಿದೆ. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ ಹೋರಾಟ ಮಾಡಿದರೆ ಅದು ಆಡಳಿತ ಪಕ್ಷಕ್ಕೆ ಹೊಡೆತ ಬೀಳಬಹುದು.

ಆರ್‌ಬಿಐ ಡೆಪ್ಯುಟಿ ಗವರ್ನರ್ ಅವಧಿ ವಿಸ್ತರಣೆ

ಮೈತ್ರಿಯಿಂದ ಹಳೆ ಮೈಸೂರು ಭಾಗದ ನಾಲ್ಕೈದು ಕ್ಷೇತ್ರಗಳಲ್ಲಿ ಎರಡು ಪಕ್ಷಗಳಿಗೆ ಅನುಕೂಲಕರವಾಗಬಹುದು. ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸುವ ಪ್ರಯತ್ನದಲ್ಲಿದೆ. ಆದರೆ ಬಿಜೆಪಿ ಜೆಡಿಎಸ್ ಮೈತ್ರಿ ಇದಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ತುಮಕೂರು ಕ್ಷೇತ್ರಗಳಲ್ಲಿ ಗೆಲ್ಲಲು ಅವಕಾಶ ಇರುವುದು ಅಲ್ಲಗಳೆಯುವ ಹಾಗಿಲ್ಲ.

ಚುನಾವಣೆ ಸಂದರ್ಭದಲ್ಲಿ ಮೈತ್ರಿಯಾದರೂ ಬಿಜೆಪಿ ಹಾಗೂ ಜೆಡಿಎಸ್ ತಳಮಟ್ಟದ ಕಾರ್ಯಕರ್ತಲ್ಲಿ ಹೊಂದಾಣಿಕೆ ಕೊರತೆ ಸೃಷ್ಟಿಯಾಗಬಹುದು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ಸಂದರ್ಭದಲ್ಲಿ ಇದೇ ಸಮಸ್ಯೆ ಎದುರಾಗಿತ್ತು. ಬದ್ಧ ಎದುರಾಳಿ ಕಾರ್ಯಕರ್ತರು ಮೇಲ್ಮಟ್ಟದ ಮೈತ್ರಿಗೆ ಹೊಂದಾಣಿಕೆ ಆಗುವುದು ಕಷ್ಟ. ಇದು ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಅಲ್ಲಗಳೆಯುವ ಹಾಗಿಲ್ಲ.

ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್ ಗೆ ಬೀಳುತ್ತಿದ್ದ ಮುಸ್ಲಿಂ ಮತಗಳು ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಪಾಲಾಗುವ ಸಾಧ್ಯತೆ ಇದೆ. ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಬಿಂಬಿಸಿ ಅದರ ಲಾಭ ಗಳಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಆದರೆ ಇದೀಗ ಎರಡು ಪಕ್ಷಗಳ ನಡುವೆ ಅಕೃತ ಮೈತ್ರಿ ನಡೆದಿರುವುದು ಕಾಂಗ್ರೆಸ್ ಗೆ ಮುಸ್ಲಿಂ ಮತಗಳು ಪೂರ್ಣ ಪ್ರಮಾಣದಲ್ಲಿ ಗಳಿಸಲು ಅವಕಾಶವಾಗಲಿದೆ. ಇದು ಜೆಡಿಎಸ್ ಗೆ ಭವಿಷ್ಯದಲ್ಲಿ ಹಿನ್ನಡೆ ಆಗಲಿದೆ.

ಜೆಡಿಎಸ್ ಬಿಜೆಪಿಯ ಸೈದ್ಧಾಂತಿಕ ನಿಲುವನ್ನು ಸದಾ ಖಂಡಿಸುತ್ತಾ ಬಂದಿದೆ. ಅದರಲ್ಲೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಜೊತೆಗಿನ ಮೈತ್ರಿಗೆ ಸೈದ್ಧಾಂತಿಕ ಕಾರಣ ನೀಡಿ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದರು. ಆದರೆ ಇದೀಗ ಎಚ್.ಡಿ.ದೇವೇಗೌಡರ ಜಾತ್ಯತೀತ ವರ್ಚಸ್ಸಿಗೆ ಈ ಮೈತ್ರಿ ಪೆಟ್ಟು ಕೊಟ್ಟಂತಾಗುತ್ತದೆ. ಇದನ್ನು ಕಾಂಗ್ರೆಸ್ ಅಸ್ತ್ರವಾಗಿ ಬಳಸಲಿದೆ.
ಬಿಜೆಪಿ ಕುಟುಂಬ ರಾಜಕಾರಣದ ವಿರುದ್ಧ ಸದಾ ಟೀಕೆ ಮಾಡುತ್ತಾ ಬಂದಿದೆ.

ಜೆಡಿಎಸ್ ಪಕ್ಷವನ್ನು ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದರು. ಆದರೆ ಇದೀಗ ಅದೇ ಪಕ್ಷದ ಜೊತೆಗೆ ಬಿಜೆಪಿ ಮೈತ್ರಿ ಮಾಡುತ್ತಿದೆ. ಕುಟುಂಬ ರಾಜಕಾರಣದ ವಿರುದ್ಧ ಮಾತನಾಡುತ್ತಿದ್ದ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಗೆ ಒಂದು ಅಸ್ತ್ರ ಸಿಕ್ಕಂತಾಗಿದೆ.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಎರಡು ಪಕ್ಷಗಳಲ್ಲಿ ವಿರೋಧ ಇದೆ.

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕೆಲವು ಶಾಸಕರು ಹಾಗೂ ಮುಖಂಡರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರೀತಂ ಗೌಡ, ಶರಣುಗೌಡ ಕುಂದಕೂರು, ಕರೆಮ್ಮ ನಾಯಕ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಪಕ್ಷದ ಮೇಲೆ ದೀರ್ಘಕಾಲಿಕ ಪರಿಣಾಮ ಬೀರುವ ಸಾಧ್ಯತೆ ಇದೆ. ಅಲ್ಲದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರುಗಳನ್ನು ಕಳೆದುಕೊಳ್ಳುವ ಅಪಾಯವೂ ಇದೆ.

RELATED ARTICLES

Latest News