Sunday, October 6, 2024
Homeರಾಜಕೀಯ | Politics"ದಸರಾ ಮೊದಲ ದಿನವೇ ಘಜ್ನಿ ಸಂಸ್ಕೃತಿ ಮೆರೆದ ಕಾಂಗ್ರೆಸ್"

“ದಸರಾ ಮೊದಲ ದಿನವೇ ಘಜ್ನಿ ಸಂಸ್ಕೃತಿ ಮೆರೆದ ಕಾಂಗ್ರೆಸ್”

Congress Government showcases culture of Ghazni on Dasara, says Karnataka BJP chief

ಬೆಂಗಳೂರು,ಅ.3– ದಸರೆಯ ಮೊದಲ ದಿನವೇ ಘಜನಿ ಮಹಮದ್‌ ಸಂಸ್ಕೃತಿ ಮೆರೆದ ಕಾಂಗ್ರೆಸ್‌‍ ಸರ್ಕಾರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌‍ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸ ಗೊಳಿಸಿದ ಕುಖ್ಯಾತಿಯ ಘಜ್ನಿ ಮಹಮದ್‌ ಸಂಸ್ಕೃತಿಯನ್ನು ನಾಡಹಬ್ಬ ದಸರಾ ಸಂದರ್ಭದಲ್ಲಿ ಮೆರೆದು ಕನ್ನಡ ನಾಡಿನ ಮಹನೀಯರನ್ನು ಅವಮಾನಿಸಿದೆ. ಇದು ನಾಡಹಬ್ಬಕ್ಕೆ ಬಳಿದ ಕಪ್ಪುಮಸಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಕರ್ನಾಟಕದ ಸಾಂಸ್ಕೃತಿಕ ವೈಭವವನ್ನು ಪ್ರತಿಬಿಂಬಿಸುವ ಒಂದು ಭಾಗವಾಗಿರುವ ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ನಾಡಿನ ಕಲೆ, ಸಂಸ್ಕೃತಿಯ ವೈಭವವನ್ನು ಸಾರುವ ಬೃಹತ್‌ ಕಾರ್ಯಕ್ರಮಗಳನ್ನು ಹಮಿಕೊಳ್ಳಲಾಗುತ್ತಿತ್ತು. ಇದನ್ನು ಆಸ್ವಾದಿಸಲು ಬರುವ ಪ್ರೇಕ್ಷಕ ವೃಂದಕ್ಕೆ ಕನ್ನಡ ನಾಡು,ನುಡಿ, ಪರಂಪರೆಗೆ ಮಹಾನ್‌ ಕೊಡುಗೆ ಕೊಟ್ಟ ಮಹನೀಯರನ್ನು ಸರಿಸುವ ನಾಮಫಲಕಗಳನ್ನು ಅಳವಡಿಸಲಾಗುತ್ತಿತ್ತು.

ಪುರಂದರದಾಸರು, ಕನಕದಾಸರು, ದ.ರಾ ಬೇಂದ್ರೆ, ಕುವೆಂಪು, ಡಾ.ರಾಜ್‌ ಕುಮಾರ್‌, ವಿ.ಕೃ ಗೋಕಾಕ್‌, ಟಿ.ಎನ್‌. ಬಾಲಕೃಷ್ಣ, ಸಂಗೀತ ದಿಗ್ಗಜರುಗಳಾದ ವಾಸುದೇವಾಚಾರ್ಯ, ಪಿಟೀಲು ಚೌಡಯ್ಯ ಇಂತಹ ಅನೇಕ ಮಹನೀಯರ ನಾಮಫಲಕಗಳನ್ನು ಅಳವಡಿಸಿ ವಸ್ತು ಪ್ರದರ್ಶನಕ್ಕೆ ಬರುವವರಿಗೆ ಅವರನ್ನು ಸರಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿತ್ತು ಎಂದು ಸರಿಸಿಕೊಂಡಿದ್ದಾರೆ.

ಮಾಜಿ ಮೇಯರ್‌ ಅಯೂಬ್ ಖಾನ್‌ ಅವರನ್ನು ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಕಾಂಗ್ರೆಸ್‌‍ ಸರ್ಕಾರ ಇತ್ತೀಚೆಗಷ್ಟೇ ನೇಮಿಸಿದ್ದು ಇದೀಗ ನಾಡಹಬ್ಬ ದಸರೆಯ ನವರಾತ್ರಿಯ ಆರಂಭದ ದಿನವೇ ನಮ ಪರಂಪರೆ, ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಮಹಾನ್‌ ಕೊಡುಗೆ ಕೊಟ್ಟ ಮಹಾನ್‌ ಸಾಧಕ ಮಹನೀಯರುಗಳ ಸರಿಸುವ ಫಲಕಗಳನ್ನೆಲ್ಲ ಕಿತ್ತೆಸೆದು ಘಜ್ನಿ ಸಂಸ್ಕೃತಿಯನ್ನು ಮೆರೆಸಲಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಕೂಡಲೇ ಇದ್ದ ಸ್ಥಳದಲ್ಲೇ ನಾಮಫಲಕಗಳನ್ನು ಅಳವಡಿಸಿ ರಾಜ್ಯ ಸರ್ಕಾರ ನಾಡಿನ ಜನತೆಯ ಕ್ಷಮೆ ಯಾಚಿಸಬೇಕು. ಸ್ವತಃ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾಗೂ ಅವರ ನೆರಳಿನಲ್ಲೇ ನಡೆದಿರುವ ದುಷ್ಕೃತ್ಯದ ಹೊಣೆ ಹೊರಬೇಕು ಹಾಗೂ ಜನರ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದರು.

RELATED ARTICLES

Latest News