Wednesday, May 1, 2024
Homeರಾಜ್ಯಮುಂದಿನ ಅವಧಿಗೂ ಕಾಂಗ್ರೆಸ್‍ನದ್ದೇ ಸರ್ಕಾರ, ಮುಂದುವರಿಯಲಿವೆ ಗ್ಯಾರಂಟಿಗಳು : ಸಿಎಂ

ಮುಂದಿನ ಅವಧಿಗೂ ಕಾಂಗ್ರೆಸ್‍ನದ್ದೇ ಸರ್ಕಾರ, ಮುಂದುವರಿಯಲಿವೆ ಗ್ಯಾರಂಟಿಗಳು : ಸಿಎಂ

ಬೆಂಗಳೂರು, ಏ.18- ಪ್ರಸಕ್ತ ಅವಧಿಗಷ್ಟೇ ಅಲ್ಲ, ಮುಂದಿನ ಅವಧಿಗೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಗ್ಯಾರಂಟಿ ಯೋಜನೆಗಳನ್ನು ಅಬಾತವಾಗಿ ಮುಂದುವರೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಕಾಂಗ್ರೆಸ್‍ನ ಪಂಚಖಾತ್ರಿ ಯೋಜನೆಗಳು ತಾತ್ಕಾಲಿಕ. ಲೋಕಸಭಾ ಚುನಾವಣೆ ಬಳಿಕ ಅವು ಸ್ಥಗಿತಗೊಳ್ಳುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರೇನು ಶಾಸ್ತ್ರ ಹೇಳುತ್ತಾರೆಯೇ? ಎಂದು ಕಿಡಿಕಾರಿದರು.

ತಾತ್ಕಾಲಿಕ ಎಂದರೆ ಏನರ್ಥ? ಈ ಅವಧಿ ಮುಂದಿನ ಅವಧಿಗೂ ನಾವೇ ಅಧಿಕಾರದಲ್ಲಿರುತ್ತೇವೆ. ಯಾವ ಕಾರಣಕ್ಕೂ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಮುಂದಿನ ವರ್ಷಕ್ಕೆ 52 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿಗಾಗಿ ಬಜೆಟ್‍ನಲ್ಲಿ ಮೀಸಲಿಡಲಾಗಿದೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ವಾತಾವರಣದ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಪರವಾದ ಅಲೆಯಿದೆ. ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES

Latest News