ಗೃಹಲಕ್ಷ್ಮಿ ಹಣ ಸಂದಾಯ ಸ್ಥಗಿತ..? : ಮಾತು ತಪ್ಪಿದ ‘ಗ್ಯಾರಂಟಿ’ ಸರ್ಕಾರದ ವಿರುದ್ಧ ಜನಾಕ್ರೋಶ

ಬೆಂಗಳೂರು,ಜು.3- ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಸ್ಥಗಿತಗೊಳಿಸಲಾಗಿದ್ದು, ಮಾತು ತಪ್ಪಿದ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಲೋಕಸಭಾ ಚುನಾವಣೆಗೂ ಮುನ್ನ ಯೋಜನೆಯನ್ನು ಜಾರಿಗೊಳಿಸಿದ್ದ ರಾಜ್ಯಸರ್ಕಾರ ನಿಯಮಿತವಾಗಿ ಮೂರು ತಿಂಗಳಿಗೂ ಹೆಚ್ಚು ಕಾಲ ಹಣ ಸಂದಾಯ ಮಾಡಿದೆ.ಲೋಕಸಭಾ ಚುನಾವಣೆ ನಂತರ ಏಕಾಏಕಿ ಹಣ ಸಂದಾಯ ಸ್ಥಗಿತಗೊಂಡಿದೆ. ಮತದಾನಕ್ಕೂ ಹಿಂದುಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಹಣವನ್ನು ಪಾವತಿಸಲಾಗಿತ್ತು. ಫಲಿತಾಂಶದಲ್ಲಿ ಕಾಂಗ್ರೆಸ್‌‍ ಪಕ್ಷ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸದೇ ಇರುವುದರಿಂದ ಯೋಜನೆಗಳ ಬಗ್ಗೆ ವ್ಯಾಪಕ ವಿಮರ್ಶೆಗಳು ಶುರುವಾಗಿವೆ. … Continue reading ಗೃಹಲಕ್ಷ್ಮಿ ಹಣ ಸಂದಾಯ ಸ್ಥಗಿತ..? : ಮಾತು ತಪ್ಪಿದ ‘ಗ್ಯಾರಂಟಿ’ ಸರ್ಕಾರದ ವಿರುದ್ಧ ಜನಾಕ್ರೋಶ