ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್ ಆಕಾಂಕ್ಷಿಗಳ ಎದೆಬಡಿತ ಹೆಚ್ಚಿಸಿದ ದೆಹಲಿ ಮೀಟಿಂಗ್

ಬೆಂಗಳೂರು, ಮೇ 30- ವಿಧಾನಸಭೆಯಿಂದ ವಿಧಾನಪರಿಷತ್‌ನ ಸದಸ್ಯರ ಆಯ್ಕೆಗೆ ಸಂಬಂಧಪಟ್ಟಂತೆ ವಾತಾವರಣ ಸಂಪೂರ್ಣ ಬದಲಾಗಿದ್ದು, ದೆಹಲಿಯಲ್ಲಿ ನಿನ್ನೆ ಸಂಜೆ ನಡೆದ ಮಹತ್ವದ ಸಭೆ ಆಕಾಂಕ್ಷಿಗಳ ಎದೆಬಡಿತವನ್ನು ಹೆಚ್ಚಿಸಿದೆ. ಸಚಿವ ಬೋಸ್‌‍ರಾಜ್‌ ಅವರಿಗೆ ಎಂಎಲ್‌ಸಿ ಸ್ಥಾನ ಸಿಗುವುದು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಆದರೆ ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ನಡೆದ ಕಸರತ್ತುಗಳು ವಾತಾವರಣವನ್ನು ಬದಲಾವಣೆ ಮಾಡಿದೆ. ವಿಧಾನಪರಿಷತ್‌ನಲ್ಲಿ ಆಡಳಿತ ಪಕ್ಷದ ನಾಯಕ ಸ್ಥಾನಕ್ಕೆ ಪ್ರಬಲ ವ್ಯಕ್ತಿಯ ಅಗತ್ಯವಿದೆ ಎಂಬ ಚರ್ಚೆಯ ಹಿನ್ನೆಲೆಯಲ್ಲಿ ಎನ್‌.ಎಸ್‌‍.ಬೋಸರಾಜ್‌ ಅವರನ್ನು ವಿಧಾನಪರಿಷತ್‌ಗೆ ಮರು ಆಯ್ಕೆ … Continue reading ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್ ಆಕಾಂಕ್ಷಿಗಳ ಎದೆಬಡಿತ ಹೆಚ್ಚಿಸಿದ ದೆಹಲಿ ಮೀಟಿಂಗ್