Sunday, April 28, 2024
Homeರಾಜ್ಯಗೋಪಾಲಯ್ಯ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದ ಪದ್ಮರಾಜ್ ಅರೆಸ್ಟ್

ಗೋಪಾಲಯ್ಯ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದ ಪದ್ಮರಾಜ್ ಅರೆಸ್ಟ್

ಬೆಂಗಳೂರು, ಫೆ.14- ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರಿಗೆ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾದ ನಂತರ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪದ್ಮರಾಜ್ ಅವರ ಮನೆ ಬಳಿ ತೆರಳಿ ನಂತರ ಅವರನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆತಂದು ಬಂಧಿಸಿ ವಿಚಾರಣೆ ಗೊಳಪಡಿಸಿದ್ದಾರೆ.

ಜೀವ ಬೆದರಿಕೆ ದೂರು:
ವಿನಾಃ ಕಾರಣ ನನಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ಕೊಡುವಂತೆ ದಮಕಿ ಹಾಕಿ ಜೀವ ಬೆದರಿಕೆ ಹಾಕಿದ್ದಾರೆಂದು ಮಾಜಿ ಕಾಪೆರ್ರೇಟರ್ ಪದ್ಮರಾಜ್ ವಿರುದ್ಧ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾತ್ರಿ 11 ಗಂಟೆ ಸುಮಾರಿನಲ್ಲಿ ಬಸವೇಶ್ವರ ನಗರ ವಾರ್ಡ್‍ನ ಮಾಜಿ ಕಾರ್ಪೊರೇಟರ್ ಪದ್ಮರಾಜು ಅವರು ಮೊಬೈಲ್‍ನಿಂದ ನನಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಯಾವುದೇ ಕಾರಣವಿಲ್ಲದೆ ನನ್ನ ಕುಟುಂಬವನ್ನು ನಿರ್ನಾಮ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಪದ್ಮರಾಜು ಅವರ ಹಾಗೂ ನನ್ನ ನಡುವೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲದಿದ್ದರೂ ಸಹ ನನಗೆ ಕರೆ ಮಾಡಿ ಹಣವನ್ನು ನೀಡಬೇಕು. ಖರ್ಚಿಗೆ ಹಣ ನೀಡದೇ ಹೋದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ. ನನ್ನ ಕಡೆಯ ಹುಡುಗರನ್ನು ಕಳುಹಿಸಿ ಇಡೀ ಕುಟುಂಬವನ್ನು ಕೊಲೆ ಮಾಡಿಸುತ್ತೇನೆಂದು ಜೀವ ಬೆದರಿಕೆ ಹಾಕಿರುವುದಾಗಿ ಶಾಸಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ

ನನ್ನನ್ನು ನಿಂದಿಸಿ ಬೆದರಿಕೆ ಹಾಕಿ ನನಗೆ ಭಯಪಡಿಸಿದ್ದಾರೆ. ಮುಂದೆ ನನಗೆ ಹಾಗೂ ನನ್ನ ಕುಟುಂಬಕ್ಕೆ ಯಾವುದೇ ರೀತಿಯ ಹಾನಿ ಅಥವಾ ತೊಂದರೆ ಉಂಟಾದರೆ ಪದ್ಮರಾಜ ಅವರೇ ಹೊಣೆಗಾರರಾಗಿರುತ್ತಾರೆ. ಹಾಗಾಗಿ ನನಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿ ಹಣವನ್ನು ಕೊಡುವಂತೆ ಹೆದರಿಸಿರುವ ಪದ್ಮರಾಜು ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪದ್ಮರಾಜ್ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದೇವೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಈ ಸಂಜೆಗೆ ತಿಳಿಸಿದ್ದಾರೆ.

RELATED ARTICLES

Latest News