Thursday, May 2, 2024
Homeಬೆಂಗಳೂರುಬೆಂಗಳೂರು : ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊರಿಯರ್ ಬಾಯ್ ಕೊಲೆ

ಬೆಂಗಳೂರು : ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ಕೊರಿಯರ್ ಬಾಯ್ ಕೊಲೆ

ಬೆಂಗಳೂರು, ಏ.19- ಸ್ನೇಹಿತರ ಜೊತೆ ಪಾರ್ಟಿ ಮಾಡಲು ಹೋಗಿದ್ದ ಕೊರಿಯರ್ ಬಾಯ್ನ ತಲೆ ಮೇಲೆ ಹಾಲೋಬ್ರಿಕ್ಸ್ ಇಟ್ಟಿಗೆ ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.ಶಿವಾಜಿನಗರದ ಬ್ರಾಡ್ವೇ ರೋಡ್ ನಿವಾಸಿ ಸತೀಶ್ ಕುಮಾರ್(33) ಕೊಲೆಯಾದ ಕೊರಿಯರ್ ಬಾಯ್.

ರಾತ್ರಿ ಸ್ನೇಹಿತರೊಂದಿಗೆ ಮದ್ಯ ಸೇವಿಸಲು ದೊಮ್ಮಲೂರು ಬಿಡಿಎ ಪಾರ್ಕ್ ಬಳಿ ಸತೀಶ್ಕುಮಾರ್ ಹೋಗಿದ್ದನು. ಆ ವೇಳೆ ಸ್ನೇಹಿತರ ನಡುವೆ ಮದ್ಯದ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಜಗಳವಾಗಿದೆ.ಬೆಳಗಿನ ಜಾವ 2.30ರ ಸುಮಾರಿನಲ್ಲಿ ಒಂದು ಹಂತದಲ್ಲಿ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಆ ವೇಳೆ ಸತೀಶ್ಕುಮಾರ್ ತಲೆ ಮೇಲೆ ಹಾಲೋಬ್ರಿಕ್ಸ್ ಇಟ್ಟಿಗೆ ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಸ್ನೇಹಿತರು ಸ್ಥಳದಿಂದ ಪರಾರಿಯಾಗಿದ್ದಾರೆ.

ಬೆಳಗಿನ ಜಾವ ಈ ಮಾರ್ಗದಲ್ಲಿ ಹೋಗುತ್ತಿದ್ದ ದಾರಿ ಹೋಕರು ನಡುರಸ್ತೆಯಲ್ಲಿ ಯುವಕನ ಕೊಲೆಯಾಗಿರುವುದು ಗಮನಿಸಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ.ಸ್ನೇಹಿತರೇ ಕುಡಿದ ಅಮಲಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

RELATED ARTICLES

Latest News