ಬೆಂಗಳೂರು,ಜ.14- ಸಂಕ್ರಾಂತಿ ಹಬ್ಬದ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಯಾಗಲಿದ್ದು, ಚುನಾವಣೆಗೂ ಮುನ್ನವೇ ಆಪರೇಷನ್ ಕಮಲ ನಡೆಸುತ್ತೇವೆ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿರುವ ಆಡಿಯೊ ಈಗ ಸಂಚಲನ ಸೃಷ್ಟಿಸಿದೆ.
ಬಿಜೆಪಿ ಮುಖಂಡ ಯೋಗೇಶ್ವರ್ ಸಂಭಾಷಣೆಯ ಆಡಿಯೋ ವೈರಲ್ಲಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ನ ಅನೇಕ ನಾಯಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಸಂಕ್ರಾಂತಿ ಹಬ್ಬದ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ ಕಾದು ನೋಡಿ ಎಂದು ಹೇಳಿದ್ದಾರೆ. ಆದರೆ ತಮ್ಮ ಭಾಷಣದಲ್ಲಿ ಯಾರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ,
ಹಾಗೂ ಅವರು ಹೆಸರುಗಳನ್ನು ಯೋಗೇಶ್ವರ್ ಬಹಿರಂಗಪಡಿಸಿಲ್ಲ. ಚನ್ನಪಟ್ಟಣದಲ್ಲಿ ನಮ್ಮದೇನು ನಡೆಯುವುದಿಲ್ಲ. ಅಲ್ಲಿ ಜೆಡಿಎಸ್ ಮತ್ತು ಕುಮಾರಸ್ವಾಮಿ ಅವರದೇ ಎನ್ನುವ ಮೂಲಕ ಚುನಾವಣೆಗೂ ಮುನ್ನವೇ ಯೋಗೇಶ್ವರ್ ಸೋಲೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಸುಮಾರು 10 ನಿಮಿಷಗಳ ಈ ಆಡಿಯೋದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಪಕ್ಷ ಸೇರ್ಪಡೆಗೆ ಹೈಕಮಾಂಡ್ ನಮಗೆ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಅವರು ಎಸ್ ಎಂದರೆ ಅನೇಕ ಪ್ರಮುಖರು ಬಿಜೆಪಿಗೆ ಬರಲಿದ್ದಾರೆ ಎಂದು ಪ್ರಸ್ತಾಪಿಸಿದ್ದಾರೆ.
ಆಡಿಯೋದಲ್ಲಿ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಸ್ಟ್ರೆ ೈಟ್ ಫಾರ್ವಡ್. ಅವರು ನಾನೇ ಸಿಎಂ ಆಗಬೇಕು ಎನ್ನುತ್ತಿದ್ದಾರೆ. ಇದಕ್ಕೆ ನಮ್ಮದೇನು ಸಮಸ್ಯೆ ಇಲ್ಲ. ಡಿಕೆಶಿ, ಸಿದ್ದರಾಮಯ್ಯ ಅವರಿಬ್ಬರೂ ನೇರ ಸ್ರ್ಪಗಳು. ನಾವು ಸಂಕ್ರಾಂತಿ ಆದ ಮೇಲೆ ಬಹಳ ಡೆವಲ್ಪ್ಮೆಂಟ್ ಮಾಡ್ತೀವಿ. ಮೈಸೂರು ಭಾಗದಲ್ಲಿ ಕಾಂಗ್ರಸಿಗರು ಬಹಳ ಮಂದಿ ನಮ್ಮ ಪಕ್ಷಕ್ಕೆ ಬರುತ್ತಾರೆ.
ಅವರಿಂದ ನಾಲ್ಕೈದು ಕ್ಷೇತ್ರದಲ್ಲಿ ನಮಗೆ ಪ್ಲಸ್ ಆಗುತ್ತೆ. ಮಂಡ್ಯ, ಕೋಲಾರದಿಂದ ಒಬ್ಬರು ನಮ್ಮ ಕಡೆಗೆ ಬರ್ತಾರೆ. ಎಳೆಂಟು ಬಾರಿ ಸೆಂಟ್ರಲ್ ಮಿನಿಸ್ಟರ್ ಆಗಿದ್ದವರು ಬರ್ತಾರೆ. ನಮ್ಮ ಬಳಿ ಎಲ್ಲ ಮಾಹಿತಿ ಇದೆ. ನಾಳೆ ನಾಡಿದ್ದು ಕ್ಲಾರಿಟಿ ಸಿಗುತ್ತೆ. ಎಲೆಕ್ಷನ್ ಬಳಿಕ ಆಪರೇಷನ್ ಕಮಲ ಮಾಡೋದಿಲ್ಲ ಎಲೆಕ್ಷನ್ಗೂ ಮೊದಲೇ ಆಪರೇಷನ್ ಕಮಲ ಮಾಡ್ತೀವಿ ಎಂದಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಸೋಲ್ತಾರೆ ಎಂದು ನಾನು ಹೋಳೋದಿಲ್ಲ. ಮುಖ್ಯಮಂತ್ರಿ ಯಾಗಿದ್ದವರನ್ನು ನನ್ನ ಬಾಯಿಂದ ಸೋಲ್ತಾರೆ ಅಂತಾ ಏಕೇ ಹೇಳಲಿ? ಸಿದ್ದರಾಮಯ್ಯ ಗೆಲ್ಲಲಿ. ಅವರು ಗೆಲುವೆ ಅವರಿಗೆ ತೊಂದರೆ, ಅವರು ಗೆದ್ದರಷ್ಟೆ ಸಿಎಂ ಆಗೋದು? ಅವರ ಕೊನೆ ಪ್ರಯತ್ನ. ಕಾಂಗ್ರೆಸ್ನಲ್ಲಿ ಪಾಪುಲರ್ ಲೀಡರ್ ಎಂದರೆ ಸಿದ್ದರಾಮಯ್ಯ ಎಂದು ಹೇಳಿದ್ದಾರೆ.
ನಾನು ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡ್ತಿದ್ದಿನಿ. ಅಶೋಕ್ ಡಿ.ಕೆ.ಶಿವಕುಮಾರ್ ವಿರುದ್ದ ನಿಲ್ಲಲಿ. ಅಶ್ವತ್ಥ್ ನಾರಾಯಣ್ ಕುಮಾರಸ್ವಾಮಿ ಮಗನ ವಿರುದ್ಧ ನಿಲ್ಲಲಿ ಇದೊಂದು ಹೋರಾಟ ಆಗ್ಲಿ. ನಾನು ಸೋತರೂ ನನ್ನ ಮಂತ್ರಿ ಮಾಡ್ಲಿಲ್ಲವಾ? ಹಂಗೇ ಅವರನ್ನು ಮಂತ್ರಿ ಮಾಡ್ತಾರೆ ಎಂದಿದ್ದಾರೆ.
ಅಮಿತ್ ಶಾ ಹೇಳಿದ್ದಾರೆ. ಹೊಂದಾಣಿಕೆ ರಾಜಕೀಯ ಬೇಡ ಅಂತಾ. ಅಮಿತ್ ಶಾ ಒಂಥರ ರೌಡಿಸಂ ಕಣಯ್ಯ. ಪಾರ್ಟಿ ವಿರುದ್ಧ ಯಾರಾದರೂ ಮಾತನಾಡಿದರೆ ಅಷ್ಟೆ ಅವರ ಕಥೆ. ನಮ್ಮನೆಲ್ಲ ಮೊನ್ನೆ ಕರೆದು ಅವರು ಮಾತನಾಡಿದ್ದಾರೆ. ಪಾರ್ಟಿ ವಿರುದ್ಧ ಯಾರ್ಯಾರು ದ್ರೋಹ ಮಾಡ್ತಿದ್ದೀರಾ ಎಂದು ಗೊತ್ತು ಎಂದು ನೀಟಾಗಿ ಹೇಳಿದ್ದಾರೆ. ಇದೆಲ್ಲ ಹೊಂದಾಣಿಕೆ ಅಂತಾ ಜನರಲ್ಲಿ ಚರ್ಚೆಯಾಗುತ್ತಿದೆ. ಒಟ್ಟಿನಲ್ಲಿ ಏನೇ ಆಗ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತೆ ಎಂದಿದ್ದಾರೆ.
ಮುಖ್ಯವಾಗಿ 2023ರ ಚುನಾವಣೆಯಲ್ಲಿ ಜೆಡಿಎಸ್ನ 20 ಅಭ್ಯರ್ಥಿಗಳು ಸೋಲುತ್ತಾರೆ. ಇದರಲ್ಲಿ ಗುಬ್ಬಿ ಶ್ರೀನಿವಾಸ್, ಅರಸೀಕೆರೆ ಶಿವಲಿಂಗೇಗೌಡ, ಅರಕಲಗೂಡು ಎ.ಟಿ.ರಾಮಸ್ವಾಮಿ, ಬೆಂಗಳೂರಿನ ಗನ್ ಮಂಜು, ನೆಲಮಂಗಲದ ಶ್ರೀನಿವಾಸಮೂರ್ತಿ, ಮಳವಳ್ಳಿ ಅನ್ನದಾನಿ, ಮದ್ದೂರು ಡಿ.ಸಿ.ತಮ್ಮಣ್ಣ, ಮಂಡ್ಯ ಶ್ರೀ ನಿವಾಸ್, ಕೆ.ಆರ್.ನಗರದ ಸಾ.ರಾ.ಮಹೇಶ್ ಅವರುಗಳು ಹೀನಾಯವಾಗಿ ಸೋಲುತ್ತಾರೆ.
ರಾಮನಗರದ ಮೂರು ಕ್ಷೇತ್ರದಲ್ಲಿ ಒಂದರಲ್ಲಿ ಜೆಡಿಎಸ್ ಸೋಲುತ್ತದೆ. ಇದರಲ್ಲಿ ಎಚ್.ಡಿ.ಕುಮಾರಸ್ವಾಮಿ ಇದ್ದರೂ ಇರಬಹುದು. ಉತ್ತರ ಕರ್ನಾಟದಲ್ಲಿ 5 ಜೆಡಿಎಸ್ ಎಂಎಲ್ಎ ಇದ್ದಾರೆ. ಇದರಲ್ಲಿ ಮೂರು ಜನ ವಾಶ್ ಔಟ್ ಆಗ್ತಾರೆ. ಬಂಡೆಪ್ಪ ಕಾಶಪ್ಪನವರ್ ಜತೆಗೆ ಇನ್ನೊಬ್ಬ ಗೆಲ್ಲಬಹುದು ಅಷ್ಟೆ ಎಂದು ಮಾತಾಡಿದ್ದಾರೆ.
ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಜನಾಭಿಪ್ರಾಯದ ಮೂಲಕ ಅಕಾರಕ್ಕೆ ಬರುವುದಿಲ್ಲ. ಆದರೆ ಚುನಾವಣೆಗೂ ಮುನ್ನವೇ ಆಪರೇಷನ್ ಕಮಲ ಮಾಡಿ ನಾವೇ ಸರ್ಕಾರ ರಚನೆ ಮಾಡುತ್ತೇವೆ. ಅಮಿತ್ ಶಾ ಒಂಥರ ರೌಡಿ ರೀತಿ. ದೇವೇಗೌಡರು ಅಂಡರ್ ಸ್ಟ್ಯಾಂಡಿಂಗ್ ರಾಜಕೀಯ ಮಾಡುತ್ತಾರೆ ಕಣಯ್ಯ. ನಾನು ಕುಮಾರಸ್ವಾಮಿ ವಿರುದ್ಧ ನಿಲ್ಲುತ್ತಿದ್ದೇನೆ. ಇದೇ ಅಶೋಕ್ ಬಂದು ಡಿ.ಕೆ.ಶಿವಕುಮಾರ್ ವಿರುದ್ಧ ನಿಲ್ಲಲಿ.
ಅಶ್ವತ್ಥ್ ನಾರಾಯಣ್ ರಾಮನಗರದಿಂದ ಕುಮಾರಸ್ವಾಮಿ ಮಗನ ವಿರುದ್ಧ ನಿಲ್ಲಲಿ? 2023ಕ್ಕೆ ಒಕ್ಕಲಿಗರ ನಾಯಕರು ಯಾರು?. ಕುಮಾರಸ್ವಾಮಿ ವಿರುದ್ಧ ಗೆದ್ದ ಮೇಲೆ ನಾನು ಏಲ್ಲೊ ಇರ್ತಿನಿ. ನಾನೇ ಸಿಎಂ ಆದರೂ ಆದೆ. ಹೀಗೆ ಸವಾಲೆಸೆದಿರುವುದು ಮಾತ್ರವಲ್ಲ 2023ರ ವಿಧಾನಸಭೆ ಚುನಾವಣೆ ಕುರಿತು ಬಿಜೆಪಿಯ ಎಂಎಲ್ಸಿ ಸಿ.ಪಿ.ಯೋಗೇಶ್ವರ ಭವಿಷ್ಯ ನುಡಿದಿರುವುದು ಆಡಿಯೋದಲ್ಲಿ ಬಹಿರಂಗಗೊಂಡಿದೆ.
ಮೈಸೂರು ಭಾಗದಲ್ಲಿ ನಾವು, ದೇವೇಗೌಡರು ಅಂಡರ್ ಸ್ಟ್ಯಾಂಡಿಂಗ್ ಮಾಡಿದ್ದೊ ನನ್ನ ಅಭಿಪ್ರಾಯದ ಪ್ರಕಾರ ಬಿಜೆಪಿ ಸರ್ಕಾರ ಬರೋದಿಲ್ಲ. ಜನಾಭಿಪ್ರಾಯದ ಮೂಲಕವೂ ಬಿಜೆಪಿ ಬರೋದಿಲ್ಲ ಆದರೆ, ನಾವು ಬಿಜೆಪಿ ಸರ್ಕಾರ ರಚನೆ ಮಾಡ್ತಿವಿ. ಮಾವಿನ ಹಣ್ಣನ್ನು ಮರೆದಲ್ಲೇ ಹಣ್ಣು ಮಾಡೋಕೊ, ತಂದು ಕೆಮಿಕಲ್ ಹಾಕಿ ಹಣ್ಣು ಮಾಡೋಕು ವ್ಯತ್ಯಾಸ ಇದೆ. ನಾವು ಎರಡಕ್ಕೂ ರೆಡಿ ಇದ್ದಿವಿ. ಕಾಂಗ್ರೆಸ್ ಸ್ಟ್ರಾಂಗ್ ಇಲ್ಲ, ಸಿದ್ದರಾಮಯ್ಯ ಅವರಿಗೆ ಪಟ್ಟ ಕಟ್ಟೋಕೆ ಅವರ ಲೀಡರ್ಗಳಿಗೆ ಇಷ್ಟ ಇಲ್ಲ ಡಾ.ಪರಮೇಶ್ವರ್ ಸಹ ಇದ್ದರಲಿ ಒಬ್ಬರು ಎಂದು ಹೇಳಿದ್ದಾರೆ.
ತಮ್ಮ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯೋಗೇಶ್ವರ್ ಇದು ನಕಲಿ ಆಡಿಯೋ. ಕೆಲವರು ಚಾರಿತ್ರ್ಯವಧೆ ಮಾಡಲು ಈ ರೀತಿ ಹರಿಬಿಟ್ಟಿದ್ದಾರೆ ಎಂದು ಗುಡುಗಿದ್ದಾರೆ.