Friday, May 3, 2024
Homeರಾಜ್ಯಸೋಮಣ್ಣರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ : ಸಿ.ಟಿ.ರವಿ

ಸೋಮಣ್ಣರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ : ಸಿ.ಟಿ.ರವಿ

ಬೆಂಗಳೂರು,ಜ.6- ಯಾವುದೇ ಕಾರಣಕ್ಕೂ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಪಕ್ಷದಿಂದ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ಪಕ್ಷದ ಹಿರಿಯರು ಹಾಗೂ ಪ್ರಭಾವಿ ನಾಯಕರೂ ಹೌದು. ಅವರಿಗೆ ಕಳೆದ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು. ಅದೊಂದೇ ಕಾರಣಕ್ಕಾಗಿ ಅವರನ್ನು ಬಿಟ್ಟುಕೊಡುವುದಿಲ್ಲ ಎಂದರು.

ಸೋಮಣ್ಣನವರ ಶಕ್ತಿ ಮತ್ತು ಸಾಮಥ್ರ್ಯವನ್ನು ನಾವು ಬಳಸಿಕೊಳ್ಳುತ್ತೇವೆ. ಅವರ ಹಿರಿತನಕ್ಕೆ ತಕ್ಕಂತೆ ಜವಾಬ್ದಾರಿಯನ್ನು ಪಕ್ಷ ನೀಡಲಿದೆ. ಎಂಥದ್ದೇ ಸಂದರ್ಭದಲ್ಲೂ ಅವರಿಗೆ ಮುಜುಗರವಾಗುವ ರೀತಿ ನಡೆದುಕೊಳ್ಳುವುದಿಲ್ಲ. ಅವರಿಗೆ ಖಂಡಿತವಾಗಿಯೂ ಸೂಕ್ತವಾದ ಸ್ಥಾನಮಾನ ಸಿಗಲಿದೆ. ರಾಜಕಾರಣದಲ್ಲಿ ಕೆಲವು ಸಂದರ್ಭದಲ್ಲಿ ಏರಿಳಿತಗಳು ಉಂಟಾಗುವುದು ಸಹಜ ಎಂದರು.

ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ

ಅವರಿಗೆ ಯಾವ ಸ್ಥಾನಮಾನ ಕೊಡುತ್ತಾರೆ ಎಂಬುದರ ಬಗ್ಗೆ ನಮಗೆ ಖಂಡಿತವಾಗಿಯೂ ಮಾಹಿತಿ ಇಲ್ಲ. ಅವರ ಸಾಮಥ್ರ್ಯಕ್ಕೆ ತಕ್ಕಂತೆ ಸ್ಥಾನಮಾನ ಸಿಗಲಿದೆ. ಸೋಮಣ್ಣನವರು ಹಿರಿಯರು. ಎಂಥದ್ದೇ ಸಂದರ್ಭದಲ್ಲೂ ಅವರು ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವನ್ನು ಸಿ.ಟಿ.ರವಿ ವ್ಯಕ್ತಪಡಿಸಿದರು.
ಅವರಿಗೆ ಜವಾಬ್ದಾರಿಯುತವಾದ ಸ್ಥಾನ ಕೊಡುವ ಕೆಲಸವಾಗಿದೆ. ಸೋಮಣ್ಣನವರನ್ನು ನಾನೇ ಭೇಟಿಯಾಗಿ ಮಾತನಾಡುತ್ತೇನೆ. ಎಲ್ಲ ಹಿರಿಯರ ಜೊತೆ ಸಮಾಲೋಚನೆ ನಡೆಸುತ್ತೇವೆ. ಒಗ್ಗಟ್ಟಾಗಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.

ಇದೇ ವೇಳೆ ಕರ ಸೇವಕ ಶ್ರೀ ಕಾಂತ್ ಪೂಜಾರಿ ಜಾಮೀನು ಸಿಕ್ಕಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು, ರಾಮ ಮಂದಿರದ ಉದ್ಘಾಟನೆ ಸಮಯದಲ್ಲಿ ಕಾಂಗ್ರೆಸ್ 31 ವರ್ಷಗಳ ಹಿಂದಿನ ಪ್ರಕರಣ ಕೆದಕಿರುವುದು ಶೋಭೆಯಲ್ಲ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಕಾಂಗ್ರೆಸ್ ರಾಮ ಭಕ್ತರ ಮೇಲೆ ದ್ವೇಷ ತೋರಿಸುತ್ತಿದೆ ಎಂದು ದೂರಿದರು.

RELATED ARTICLES

Latest News