Wednesday, October 29, 2025
Homeರಾಜ್ಯಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗ್ತಾರೆ : ಡಿ.ಕೆ.ಸುರೇಶ್‌

ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗ್ತಾರೆ : ಡಿ.ಕೆ.ಸುರೇಶ್‌

D.K. Suresh

ಬೆಂಗಳೂರು, ಅ.29– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ. ಆದರೆ ಹಣೆಯಲ್ಲಿ ಬರೆದಿದ್ದರೆ ಸಾಧ್ಯವಾಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ ಅಣ್ಣನನ್ನು ಮುಖ್ಯಮಂತ್ರಿಯಾಗಿಸಬೇಕೆಂಬ ಆಸೆ ನನಗಿದೆ. ಆದರೆ ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮ. ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ಶಿಸ್ತಿಗೆ ಚ್ಯುತಿಬರದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.ನವೆಂಬರ್‌ನಲ್ಲಿ ಕನ್ನಡದ ಹಬ್ಬ ರಾಜ್ಯೋತ್ಸವ ನಡೆಯಲಿದೆ. ಅದು ಮಾತ್ರ ನನಗೆ ಗೊತ್ತು. ಉಳಿದಂತೆ ಯಾವ ಕ್ರಾಂತಿಯ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

- Advertisement -

ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಥವಾ ಪ್ರಯತ್ನ ಪಡುವ ಅಗತ್ಯವಿಲ್ಲ. ಹಣೆಯಲ್ಲಿ ಬರದಿದ್ದರೆ ಅವಕಾಶ ಸಿಗುತ್ತದೆ. ದಲಿತ ಮುಖ್ಯಮಂತ್ರಿಯ ಬಗ್ಗೆ ಬೇಡಿಕೆಗಳು ಕೇಳಿ ಬರುತ್ತಿರುವುದರಲ್ಲಿ ತಪ್ಪಿಲ್ಲ. ದಲಿತರು ಸಮಾವೇಶ ಮಾಡುವುದು ಕೂಡ ತಪ್ಪಲ್ಲ, ಈ ಎಲ್ಲಾ ಬೆಳವಣಿಗೆಗಳು ಪಕ್ಷ ಸಂಘಟನೆಗೆ ಪೂರಕವಾಗಿವೆ.

100 ಕಾಂಗ್ರೆಸ್‌‍ ಭವನಗಳ ನಿರ್ಮಿಸುವ ಬಗ್ಗೆ ಪಕ್ಷದ ಅಧ್ಯಕ್ಷರು ಮತ್ತು ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯವಾಗಿದ್ದಾರೆ. ದಿನನಿತ್ಯವೂ ಒಂದಲ್ಲ ಒಂದು ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ನಾಯಕರಿಗೆ ಇರಬೇಕಾದ ಎಲ್ಲಾ ಅವಕಾಶಗಳು ಅವರಿಗಿದೆ. ಅವರದೇ ನಾಯಕತ್ವದಡಿ ಮುಂದಿನ ವಿಧಾನಸಭೆ ಚುನಾವಣೆಯನ್ನು ನಡೆಸುವುದರಲ್ಲಿ ತಪ್ಪಿಲ್ಲ ಎಂದರು.

95-98 ವಯಸ್ಸು ಆಗಿರುವವರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದು ತಪ್ಪಲ್ಲ ಎಂದರು.ಮಾಜಿ ಸಚಿವ ಕೆ.ಎನ್‌. ರಾಜಣ್ಣ ಹಿರಿಯರಾಗಿದ್ದು, ತಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಹಾಗಾಗ್ಗೆ ವ್ಯಕ್ತಪಡಿಸುತ್ತಾರೆ. ಹೈಕಮಾಂಡ್‌ ಕೂಡ ಅವರ ಮುಕ್ತ ಅಭಿಪ್ರಾಯಗಳನ್ನು ಗಮನಿಸುತ್ತದೆ ಎಂದರು.

ರಾಜ್ಯದಲ್ಲಿ 5 ವರ್ಷ ಸರ್ಕಾರ ನಡೆಸಲು ಕಾಂಗ್ರೆಸ್‌‍ ಪಕ್ಷಕ್ಕೆ, ಜನ 135 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಹೀಗಿರುವಾಗ ಎರಡೂವರೆ ವರ್ಷ, ಮೂರು ವರ್ಷ ಎಂಬ ಅಧಿಕಾರ ಹಂಚಿಕೆಯ ಚರ್ಚೆಗಳು ಅಪ್ರಸ್ತುತ ಎಂದರು.

ಇಂತಹ ಚರ್ಚೆಗಳು ಆಡಳಿತದ ಮೇಲೆ ಪರಿಣಾಮ ಬೀರುವ ಬಗ್ಗೆ ಮಾಹಿತಿಯಿಲ್ಲ. ನಾನು ಸಂಸದನಾಗಿದ್ದೆ. ಸಚಿವನಾಗಿ ಆಡಳಿತ ಮಾಡಿದ ಅನುಭವ ಇಲ್ಲ ಎಂದರು. ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಬಗ್ಗೆ ಮುಖಂಡರ ಅಭಿಪ್ರಾಯಗಳನ್ನು ಹೈಕಮಾಂಡ್‌ ಗಮನಿಸಲಿದೆ. ಆರ್‌ಎಸ್‌‍ಎಸ್‌‍ ಪಥ ಸಂಚಲನಕ್ಕೆ ಯಾರೂ ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಅದೇ ರೀತಿಯ ಪಥ ಸಂಚಲನವನ್ನು ಬೇರೆ ಸಮುದಾಯಗಳು ನಡೆಸಿದರೇ? ಎಂಬ ಪ್ರಶ್ನೆ ಇದೆ ಎಂದರು.

- Advertisement -
RELATED ARTICLES

Latest News