Saturday, June 28, 2025
Homeರಾಜ್ಯದತ್ತಾತ್ರೇಯ ಹೊಸಬಾಳೆ ಹೇಳಿಕೆ ಅಪ್ರಸ್ತುತ : ಗೃಹಸಚಿವ ಪರಮೇಶ್ವರ್‌

ದತ್ತಾತ್ರೇಯ ಹೊಸಬಾಳೆ ಹೇಳಿಕೆ ಅಪ್ರಸ್ತುತ : ಗೃಹಸಚಿವ ಪರಮೇಶ್ವರ್‌

Dattatreya Hosabale's statement irrelevant: Home Minister Parameshwara

ಬೆಂಗಳೂರು,ಜೂ.28- ಸಂವಿಧಾನದಿಂದ ಜಾತ್ಯತೀತ ಪದ ಬಿಡಬೇಕು ಎಂಬ ಹೇಳಿಕೆಯೇ ಅಪ್ರಸ್ತುತವಾದುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌‍ಎಸ್‌‍ನ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸರಿಯಲ್ಲ.

ಭಾರತದ ಸಂವಿಧಾನ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ರಚನೆ ಮಾಡಲಾಗಿದೆ. ಡಾ.ಬಿ.ಆರ್‌. ಅಂಬೇಡ್ಕರ್‌ರವರು ಬೇರೆಬೇರೆ ರಾಷ್ಟ್ರಗಳ ಸಂವಿಧಾನವನ್ನು ಪರಿಶೀಲಿಸಿ ಭಾರತದ ಪರಿಸ್ಥಿತಿ ಹಾಗೂ ವಿವಿಧ ಪದರಗಳನ್ನು ಅರ್ಥೈಸಿಕೊಂಡು ಜಾತ್ಯತೀತ ಪದವನ್ನು ಅಳವಡಿಸಿದ್ದಾರೆ ಎಂದರು.

1957 ರಿಂದಲೂ ಈವರೆಗೂ ಭಾರತೀಯರಾದ ನಾವು ಸಂವಿಧಾನವನ್ನು ಪಾಲನೆ ಮಾಡಿಕೊಂಡು ಬಂದಿದ್ದೇವೆ. ಇದೊಂದು ಟೈಮ್‌ ಟೆಸ್ಟೆಡ್‌ ಸಂವಿಧಾನ. ಯಾವುದೇ ರೀತಿಯ ತೊಂದರೆ ಇಲ್ಲದಂತೆ ನಡೆದುಕೊಂಡು ಬರುತ್ತಿದೆ. ಹಾಗೆಯೇ ಮುಂದುವರೆಯಬೇಕೂ ಕೂಡ ಎಂದರು.

ಎಲ್ಲರಿಗೂ ಸಮಾನ ಅವಕಾಶ ಸಿಕ್ಕಿ, ಮುಕ್ತ ಅವಕಾಶ ಸಿಗಬೇಕು ಎಂಬುದು ಜಾತ್ಯತೀತತೆಯ ಅರ್ಥವಾಗಿದೆ. ಹೊಸಬಾಳೆಯವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ವಿಶ್ವದಲ್ಲೇ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಕಾರಗೊಳಿಸಿದ ಸಂವಿಧಾನ ಭಾಷೆ, ಸಂಸ್ಕೃತಿ, ಧರ್ಮದ ವಿಭಿನ್ನತೆ ನಡುವೆ ನಮನ್ನು ಏಕತೆಯಿಂದ ಬದುಕುವಂತೆ ಮಾಡಿದೆ. ಇದನ್ನು ಬದಲಾವಣೆ ಮಾಡುವ ವಿಚಾರದಲ್ಲಿ ರಾಜಿ ಇಲ್ಲ ಎಂದು ಹೇಳಿದರು.

RELATED ARTICLES

Latest News