Thursday, May 2, 2024
Homeರಾಷ್ಟ್ರೀಯಜ.5ಕ್ಕೆ ದಾವೂದ್ ಇಬ್ರಾಹಿಂ ಬಾಲ್ಯದ ಮನೆ ಹರಾಜು

ಜ.5ಕ್ಕೆ ದಾವೂದ್ ಇಬ್ರಾಹಿಂ ಬಾಲ್ಯದ ಮನೆ ಹರಾಜು

ನವದೆಹಲಿ,ಜ.2- ಮಹಾರಾಷ್ಟ್ರದ ರತ್ನಗಿರಿಯಲ್ಲಿ ಇರುವ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಬಾಲ್ಯದ ಮನೆ ಮತ್ತು ಆತನ ಕುಟುಂಬದ ಒಡೆತನದ ಇತರ ಮೂರು ಆಸ್ತಿಗಳನ್ನು ಶುಕ್ರವಾರ ಹರಾಜು ಮಾಡಲಾಗುತ್ತಿದೆ.
ದಾವೂದ್‍ಗೆ ಸೇರಿದ ಈ ಎಲ್ಲಾ ನಾಲ್ಕು ಆಸ್ತಿಗಳು ಕೃಷಿ ಮತ್ತು ಮುಂಬಾಕೆ ಗ್ರಾಮದಲ್ಲಿ ನೆಲೆಗೊಂಡಿವೆ.
ಸ್ಮಗ್ಲರ್ಸ್ ಮತ್ತು ಫಾರಿನ್ ಎಕ್ಸ್‍ಚೇಂಜ್ ಮ್ಯಾನಿಪ್ಯುಲೇಟರ್ಸ್ (ಆಸ್ತಿ ಮುಟ್ಟುಗೋಲು) ಕಾಯಿದೆ ಅಡಿಯಲ್ಲಿ ಅಧಿಕಾರಿಗಳು ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ.

ಜ. 5 ರಂದು ಮುಂಬೈನಲ್ಲಿ ಹರಾಜು ನಡೆಯಲಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ದಾವೂದ್ ಅಥವಾ ಆತನ ಕುಟುಂಬಕ್ಕೆ ಸೇರಿದ 11 ಆಸ್ತಿಗಳನ್ನು ಹರಾಜು ಮಾಡಲಾಗಿದೆ. 4.53 ಕೋಟಿಗೆ ಮಾರಾಟವಾದ ರೆಸ್ಟೋರೆಂಟ್, 3.53 ಕೋಟಿಗೆ ಆರು ಫ್ಲಾಟ್‍ಗಳು ಮತ್ತು 3.52 ಕೋಟಿಗೆ ಮಾರಾಟವಾದ ಅತಿಥಿ ಗೃಹಗಳು ಸೇರಿವೆ.
1993 ರ ಮುಂಬೈ ಸರಣಿ ಸ್ಪೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ 1983 ರಲ್ಲಿ ಮುಂಬೈಗೆ ತೆರಳುವ ಮೊದಲು ಮುಂಬಾಕೆ ಗ್ರಾಮದಲ್ಲಿ ವಾಸಿಸುತ್ತಿದ್ದನು. 257 ಜನರ ಸಾವಿಗೆ ಕಾರಣವಾದ ಸರಣಿ ಬಾಂಬ್ ಸ್ಪೋಟದ ನಂತರ ಅವನು ಭಾರತವನ್ನು ತೊರೆದನು.

ಮೆಟ್ರೋ ಟ್ರಾಕ್ ಜಿಗಿದರೂ ಪ್ರಾಣಾಪಾಯದಿಂದ ಪಾರಾದ ಮಹಿಳೆ..!

ಮಾರ್ಚ್ 12, 1993 ರಂದು ಮುಂಬೈ (ಆಗಿನ ಬಾಂಬೆ) ಸರಣಿ ಬಾಂಬ್ ಸ್ಪೋಟಗಳಿಂದ ತತ್ತರಿಸಿತು, ಇದು 257 ಜನರನ್ನು ಕೊಂದಿತು, 700 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿತು ಮತ್ತು ಅಂದಾಜು 27 ಕೋಟಿ ಮೌಲ್ಯದ ಆಸ್ತಿಯನ್ನು ನಾಶಪಡಿಸಿತು. ಮಹಾರಾಷ್ಟ್ರ ಸರ್ಕಾರದ ಕೋರಿಕೆಯ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ.

2017 ರಂದು ಮುಸ್ತಫಾ ದೊಸ್ಸಾ ಮತ್ತು ಅಬು ಸಲೇಂ ಸೇರಿದಂತೆ ಹಲವಾರು ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಲಾಯಿತು. ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಈ ದಾಳಿಗಳನ್ನು ಯೋಜಿಸಿದ್ದನು ಎಂದು ಆರೋಪಿಸಲಾಗಿದೆ.

RELATED ARTICLES

Latest News