ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದ ಡಿಕೆಶಿ – ಪರಂ ಮಾತುಕತೆ

ಬೆಂಗಳೂರು,ಸೆ.30- ಗೃಹಸಚಿವ ಡಾ.ಜಿ.ಪರಮೇಶ್ವರ್‌ರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.ರಾಜಕೀಯ ಸೂಕ್ಷ್ಮ ಸನ್ನಿವೇಶದಲ್ಲಿ ಈ ಇಬ್ಬರೂ ನಾಯಕರ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ಖುದ್ದು ಡಿ.ಕೆ.ಶಿವಕುಮಾರ್‌ರವರೇ ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌ರವರು, ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದೆ. ತುಮಕೂರು, ಬೆಂಗಳೂರು, ಮಂಡ್ಯಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಶುರುವಾಗಿದೆ. ಎತ್ತಿನಹೊಳೆಯಿಂದ ನೀರನ್ನು ಹೊರಗೆ ತೆಗೆಯಲಾಗಿದೆ. ಬಾಕಿ ಕಾಮಗಾರಿ ಮುಂದುವರೆಸಲು ಅರಣ್ಯ ಭೂಮಿ ಅಡ್ಡ ಬಂದಿದೆ. … Continue reading ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದ ಡಿಕೆಶಿ – ಪರಂ ಮಾತುಕತೆ