Wednesday, November 5, 2025
Homeರಾಜ್ಯಏ.1ರಿಂದ ಪೂರ್ವಾನ್ವಯವಾಗುವಂತೆ 7ನೇ ರಾಜ್ಯ ವೇತನ ಆಯೋಗ ವರದಿ ಜಾರಿಗೆ ಒತ್ತಾಯ

ಏ.1ರಿಂದ ಪೂರ್ವಾನ್ವಯವಾಗುವಂತೆ 7ನೇ ರಾಜ್ಯ ವೇತನ ಆಯೋಗ ವರದಿ ಜಾರಿಗೆ ಒತ್ತಾಯ

ಬೆಂಗಳೂರು,ಮಾ.17- ರಾಜ್ಯಸರ್ಕಾರಿ ನೌಕರರು, ನಿವೃತ್ತಿ ನೌಕರರು ಹಾಗೂ ಕುಟುಂಬ ಪಿಂಚಣಿದಾರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ರಾಜ್ಯ ವೇತನ ಆಯೋಗ ನೀಡಿರುವ ವರದಿಯ ಶಿಫಾರಸ್ಸುಗಳನ್ನು 2023 ರ ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ರಾಜ್ಯಸರ್ಕಾರವನ್ನು ಒತ್ತಾಯಿಸಿದೆ.

7 ನೇ ವೇತನ ಆಯೋಗವು ನಿನ್ನೆ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಇದಕ್ಕಾಗಿ ಆಯೋಗ ಅಧ್ಯಕ್ಷರಾಗಿದ್ದ ಸುಧಾಕರ್ ಅವರನ್ನು ಹಾಗೂ ವರದಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಘದ ಅಧ್ಯಕ್ಷ ಡಾ.ಎಲ್.ಭೈರಪ್ಪ ತಿಳಿಸಿದ್ದಾರೆ.

- Advertisement -

ರಾಜ್ಯ ಸರ್ಕಾರಿ ನೌಕರರಿಗೆ, ನಿವೃತ್ತಿ ನೌಕರರಿಗೆ, ಕುಟುಂಬ ಪಿಂಚಣಿದಾರರಿಗೆ ವೇತನ, ಭತ್ಯೆಗಳನ್ನು, ನಿವೃತ್ತ ವೇತನ ಹಾಗೂ ಪಿಂಚಣಿಯನ್ನು ಆಯೋಗದ ಶಿಫಾರಸ್ಸಿನಂತೆ ಪರಿಷ್ಕರಿಸಲು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

- Advertisement -
RELATED ARTICLES

Latest News