ಬೆಂಗಳೂರು, ಜೂ.21- ಲೈಸೆನ್ಸ್ ನವೀಕರಣ ಹಾಗೂ ಹೊಸ ಪರವಾನಗಿ ಶುಲ್ಕ ಕಡಿಮೆ ಮಾಡಬೇಕು ಇಲ್ಲದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಮದ್ಯ ಮಾರಾಟಗಾರರ
ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಶುಲ್ಕ ಹೆಚ್ಚಳದಿಂದ ಮದ್ಯ ಮಾರಾಟಕ್ಕೆ ತೀವ್ರ ತೊಂದರೆಯಾಗಿದೆ. ಹೀಗಾಗಿ ಶುಲ್ಕ ಹೆಚ್ಚಳ ಕೈ ಬಿಡಬೇಕು ಎಂದು ಸಂಘದ ಸದಸ್ಯರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮಿಕೊಂಡಿರುವ ಮದ್ಯ ಮಾರಾಟಗಾರರ ಸಂಘದ ಸಮಾವೇಶದಲ್ಲಿ ಮುಖಂಡರುಗಳು ಈ ಎಚ್ಚರಿಕೆ ನೀಡಿದ್ದಾರೆ.
ಮನಸ್ಸೋ ಇಚ್ಚೆ ಮದ್ಯದ ದರ ಹೆಚ್ಚಳ ಮಾಡುವುದು, ಲೈಸೆನ್ಸ್ ನವೀಕರಣ ಶುಲ್ಕ ಹೆಚ್ಚಳ ಮಾಡುವ ಮೂಲಕ ಸರ್ಕಾರ ನಮ ಸಹನೆ ಕೆಣಕುವ ಕಾರ್ಯಕ್ಕೆ ಕೈ ಹಾಕಿದೆ. ಈ ಕೂಡಲೇ ತಮ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದು ಈ ಹಿಂದೆ ಇದ್ದ ಮಾದರಿಯನ್ನೇ ಮುಂದುವರೆಸಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಮದ್ಯ ಮಾರಾಟ ಸ್ಥಗಿತ ಗೊಳಿಸಿ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರುಗಳು ಎಚ್ಚರಿಕೆ ನೀಡಿದ್ದಾರೆ.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ