ರಾಜ್ಯದಲ್ಲಿ ಡೆಂಘೀ ಹಾವಳಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ, ಜನರ ನರಳಾಟ

ಬೆಂಗಳೂರು,ಜು.7- ರಾಜ್ಯಾದ್ಯಂತ ಡೆಂಘೀ ಪ್ರಕರಣಗಳು ತೀವ್ರಗೊಂಡಿರುವ ನಡುವೆಯೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಕಂಡುಬಂದಿದ್ದು, ಜನಸಾಮಾನ್ಯರು ಸಂಕಷ್ಟಕ್ಕೀಡಾಗುವಂತಾಗಿದೆ. ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾಸಿಟಮಲ್‌ ಹೊರತುಪಡಿಸಿದರೆ, ಉಳಿದ ಔಷಧಿಗಳ ಕೊರತೆ ತೀವ್ರವಾಗಿ ಕಾಡುತ್ತಿವೆ. ಸರ್ಕಾರದಿಂದ ಔಷಧಿ ಖರೀದಿಗೆ ಸರಿಯಾದ ಅನುದಾನ ದೊರೆಯುತ್ತಿಲ್ಲ ಎಂಬ ಆರೋಪಗಳು ತೀವ್ರವಾಗಿವೆ. ರಾಜ್ಯಸರ್ಕಾರ ಯಾವುದೇ ಆರೋಗ್ಯ ಪರಿಸ್ಥಿತಿಯನ್ನು ನಿಭಾಯಿಸಲು ಸರ್ವಸನ್ನದ್ಧವಾಗಿದೆ ಎಂಬ ಹೇಳಿಕೆಗಳು ಪದೇಪದೇ ಕೇಳಿಬರುತ್ತಿವೆ. ಆದರೆ, ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರವಾಗಿ ಹೆಚ್ಚಾಗಿವೆ. ಸುಮಾರು ಏಳೆಂಟು ಸಾವಿರ ಮಂದಿ ಈ ಸೋಂಕಿನಿಂದ … Continue reading ರಾಜ್ಯದಲ್ಲಿ ಡೆಂಘೀ ಹಾವಳಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ, ಜನರ ನರಳಾಟ