Friday, September 12, 2025
Homeರಾಜ್ಯಬುರುಡೆ ಪ್ರಕರಣ : ಎಸ್‌‍ಐಟಿ ಕಚೇರಿಯಲ್ಲಿ ಮತ್ತೆ ಮೂವರ ವಿಚಾರಣೆ

ಬುರುಡೆ ಪ್ರಕರಣ : ಎಸ್‌‍ಐಟಿ ಕಚೇರಿಯಲ್ಲಿ ಮತ್ತೆ ಮೂವರ ವಿಚಾರಣೆ

Dharmasthala Case : Three more questioned at SIT office

ಬೆಂಗಳೂರು,ಸೆ.12– ಬುರುಡೆ ಪ್ರಕರಣದಲ್ಲಿ ಇಂದು ಮತ್ತೆ ಮೂವರು ಬೆಳ್ತಂಗಡಿಯ ಎಸ್‌‍ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಗಿರೀಶ್‌ ಮಟ್ಟಣ್ಣನವರ್‌, ಜಯಂತ್‌ ಟಿ. ಹಾಗೂ ಯೂಟ್ಯೂಬರ್‌ ಪ್ರದೀಪ್‌ಗೆ ಸೂಚಿಸಲಾಗಿತ್ತು.

ಹಾಗಾಗಿ ಇಂದು ಈ ಮೂವರು ಬೆಳ್ತಂಗಡಿ ಎಸ್‌‍ಐಟಿ ಕಚೇರಿಗೆ ಹಾಜರಾಗಿದ್ದಾರೆ.ಬುರುಡೆ ಪ್ರಕರಣದ ದೂರುದಾರ ಚಿನ್ನಯ್ಯ ಬಂಧನವಾಗುತ್ತಿದ್ದಂತೆ ಆತ ವಿಚಾರಣೆ ವೇಳೆ ನೀಡಿದ ಮಾಹಿತಿಯನ್ನಾಧರಿಸಿ ಈ ಮೂವರನ್ನು ಈಗಾಗಲೇ ಎರಡು-ಮೂರು ಬಾರಿ ವಿಚಾರಣೆಗೆ ಒಳಪಡಿಸಿ ಎಸ್‌‍ಐಟಿ ಅಧಿಕಾರಿಗಳು ಕೆಲವು ಮಾಹಿತಿ ಗಳನ್ನು ಪಡೆದುಕೊಂಡಿದ್ದಾರೆ. ಇಂದು ಮತ್ತೆ ಅಧಿಕಾರಿಗಳು ಈ ಮೂವರನ್ನು ವಿಚಾರಣೆಗೆ ಒಳಪಡಿಸಿ ತನಿಖೆಯ ಭಾಗವಾಗಿ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

RELATED ARTICLES

Latest News