ನವದೆಹಲಿ,ಏ.14- ಸಂವಿಧಾನ ಶಿಲ್ಪಿ ಡಾ.ಭೀಮ್ ರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಸ್ಫೂರ್ತಿಯಿಂದಾಗಿಯೇ ದೇಶವು ಇಂದು ಸಾಮಾಜಿಕ ನ್ಯಾಯದ ಕನಸನ್ನು ನನಸಾಗಿಸಲು ಸಮರ್ಪಿತವಾಗಿದೆ ಎಂದು ಹೇಳಿದರು.
ಅವರ ತತ್ವಗಳು ಮತ್ತು ಆಲೋಚನೆಗಳು ಆತ್ಮನಿರ್ಭರ (ಸ್ವಾವಲಂಬಿ) ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣವನ್ನು ಬಲಪಡಿಸುತ್ತವೆ ಮತ್ತು ವೇಗಗೊಳಿಸುತ್ತವೆ ಎಂದು ಮೋದಿ ತಿಳಿಸಿದ್ದಾರೆ.
ನಂತರ ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಗರ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಗಣ್ಯರು ಸಂಸತ್ತಿನಲ್ಲಿ-ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿದರು.
ಪರಿಶಿಷ್ಟ ಜಾತಿಗಳ ಸಬಲೀಕರಣಕ್ಕಾಗಿ ಅಂಬೇಡ್ಕರ್ ಅವರ ಜೀವಮಾನದ ಹೋರಾಟ ಮತ್ತು ಸಂವಿಧಾನವನ್ನು ರಚಿಸುವಲ್ಲಿ ಅವರ ಪ್ರಮುಖ ಪಾತ್ರಕ್ಕಾಗಿ ಅವರನ್ನು ಗುರುತಿಸಲಾಗಿದೆ. 1891 ರಲ್ಲಿ ದಲಿತ ಕುಟುಂಬದಲ್ಲಿ ಜನಿಸಿದ ಅವರು ವಿದೇಶಗಳಲ್ಲಿ ಅಧ್ಯಯನ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಭಾರತೀಯ ಸಮಾಜದಲ್ಲಿ ಅವರು ಅನುಭವಿಸಿದ ತಾರತಮ್ಯವು ಅವರನ್ನು ಬದ್ಧ ಸಮಾಜ ಸುಧಾರಕರನ್ನಾಗಿ ಮಾಡಿತು.