ಇಬ್ಬರು ಸಚಿವರ ಜಿಲ್ಲಾ ಉಸ್ತುವಾರಿ ಬದಲಿಸಿ ಸರ್ಕಾರ ಆದೇಶ

Social Share

ಬೆಂಗಳೂರು,ಜು.30- ರಾಜ್ಯ ಸರ್ಕಾರ ಇಬ್ಬರು ಸಚಿವರ ಜಿಲ್ಲಾ ಉಸ್ತುವಾರಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರಿಗೆ ತವರು ಜಿಲ್ಲೆ ವಿಜಯನಗರ ಹಾಗೂ ವಕ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.

ಈ ಹಿಂದೆ ಹಲವು ಸಚಿವರ ಜಿಲ್ಲಾ ಉಸ್ತುವಾರಿಯನ್ನು ಬದಲಾವಣೆ ಮಾಡಲಾಗಿತ್ತು. ಆನಂದ್ ಸಿಂಗ್ ಅವರು ತಮಗೆ ತವರು ಜಿಲ್ಲೆಯ ಉಸ್ತುವಾರಿ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. ಅವರ ಮನವಿ ಮೇರೆಗೆ ವಿಜಯನಗರ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ.

Articles You Might Like

Share This Article