ಬೇಲೂರು,ಏ.3-ದಾರಿ ಬಿಡುವ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಅದು ಅತಿರೇಕಕ್ಕೆ ಹೋಗಿ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಅಮಾನುಷ ಘಟನೆ ತಾಲ್ಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ಹೋಗಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಗೋವಿಂದಪ್ಪನ ಸಂಬಂಧಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಮುಂದಾಗಿದ್ದು, ಘಟನೆ ಸಂಬಂಧ ಹಳೆಬೀಡು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.
ಮಹಿಳೆಯ ಸಂಬಂಧಿ ನೀಡಿದ ದೂರು ಆಧರಿಸಿ ಗಂಗಾಬೋವಿ, ಶಿವಕುಮಾರ್,ಸೋಮ, ಕಿರಣ್, ಆನಂದ್, ಪುನೀತ್, ಪ್ರತಾಪ್, ಪ್ರಸನ್ನ, ನಾಗಾಬೋವಿ, ಮಂಜಾಬೋವಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಗಂಗಾಬೋವಿ, ಶಿವಕುಮಾರ್ ಹಾಗೂ ಇತರರು ಮಹಿಳೆ ಮೇಲೆ ಗುಂಪಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಘಟನೆಗೆ ಸಮಬಂಧಿಸಿದಂತೆ ಎಂದು ಮಹಿಳೆಯ ಸಂಬಂಧಿಕರು ಹಾಸನ ಡಿಸಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಗ್ರಾಮದಲ್ಲಿ ಈಗ ಪೊಲೀಸರ ಬಂದೂಬಸ್ತ್ ಮಾಡಲಾಗಿದೆ.
