Sunday, September 8, 2024
Homeರಾಜ್ಯ"ಮುಂದಿನ ಸಿಎಂ ಶಿವಣ್ಣ" : ಕಾರ್ಯಕರ್ತರ ಘೋಷಣೆ

“ಮುಂದಿನ ಸಿಎಂ ಶಿವಣ್ಣ” : ಕಾರ್ಯಕರ್ತರ ಘೋಷಣೆ

ಹುಬ್ಬಳ್ಳಿ,ಮಾ.6- ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಕೇಳಿಬಂದಿದೆ.ಡಿ.ಕೆ.ಶಿವಕುಮಾರ್ ಇಂದು ಬೆಳಿಗ್ಗೆ ಹುಬ್ಬಳ್ಳಿಗೆ ಆಗಮಿಸಿದರು. ಸುದ್ದಿಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಮಾತನಾಡಲು ಆಗಮಿಸು ತ್ತಿದ್ದಂತೆ ಕೆಲವರು ಮುಂದಿನ

ಮುಖ್ಯಮಂತ್ರಿ ಶಿವಣ್ಣ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್ ಮೌನವಾಗಿದ್ದು, ಘೋಷಣೆಗಳನ್ನುಆಲಿಸಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಪುತ್ರ ಯತೀಂದ್ರ ಮುಂದಿನ 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿಕೆ ನೀಡಿದ್ದರು. ಆ ಕುರಿತಂತೆ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದರು.

ಇತ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ದಲಿತರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ ಎಂದು ಅಸಮಾಧಾನ ಹೊರಹಾಕಿದ್ದ ಬೆಳವಣಿಗೆ ನಡೆದಿದೆ.

RELATED ARTICLES

Latest News