Sunday, April 28, 2024
Homeರಾಜಕೀಯಪ್ರತಿಸ್ಪರ್ಧಿ ಡಾ.ಮಂಜುನಾಥ್ ಸ್ಪರ್ಧೆ ಕುರಿತು ವ್ಯಂಗ್ಯವಾಡಿದ ಡಿ.ಕೆ.ಸುರೇಶ್

ಪ್ರತಿಸ್ಪರ್ಧಿ ಡಾ.ಮಂಜುನಾಥ್ ಸ್ಪರ್ಧೆ ಕುರಿತು ವ್ಯಂಗ್ಯವಾಡಿದ ಡಿ.ಕೆ.ಸುರೇಶ್

ಬೆಂಗಳೂರು,ಮಾ.14- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪಕ್ಷ ಸರಿಯಿಲ್ಲ ಎಂದು ಬುದ್ಧಿವಂತ ಅಳಿಯ ಡಾ.ಸಿ.ಎನ್.ಮಂಜುನಾಥ್ ತೀರ್ಮಾನ ಮಾಡಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ತಮ್ಮ ವಿರುದ್ಧ ಡಾ.ಸಿ.ಎನ್.ಮಂಜುನಾಥ್ ಅಭ್ಯರ್ಥಿಯಾಗಿರು ವುದು ಅಚ್ಚರಿಯ ವಿಚಾರವೇನಲ್ಲ. ಇದು ದೇವೇಗೌಡರ ಕುಟುಂಬದ ಮತ್ತೊಂದು ಭಾಗ ಅಷ್ಟೇ ಎಂದರು.

ಡಾ. ಮಂಜುನಾಥ್ ಅವರ ರಾಜಕೀಯ ಪ್ರವೇಶ ವನ್ನು ನಾನು ಸ್ವಾಗತಿಸುತ್ತೇನೆ. ರಾಜಕೀಯಕ್ಕೆ ಬಂದ ಮೇಲೆ ಅವರನ್ನು ರಾಜಕಾರಣ ದೃಷ್ಟಿಯಿಂದಲೇ ನೋಡಬೇಕಾಗುತ್ತದೆ. ಅವರಿಗೆ ಶುಭವಾಗಲಿ ಎಂದು ಹೇಳಿದರು. ರಾಜಕೀಯ ಪ್ರವೇಶಿಸಿದ್ದೇಕೆ ಎಂಬುದರ ಬಗ್ಗೆ ಮಂಜುನಾಥ್ರವರೇ ಸ್ಪಷ್ಟನೆ ನೀಡಬೇಕು. ನಾನು ಬಿಜೆಪಿ ಅಭ್ಯರ್ಥಿ ಪರವಾಗಿ ಮಾತನಾಡಿದರೆ ಅದು ವಕ್ರವಾಗಿರುತ್ತದೆ ಎಂದು ತಿಳಿಸಿದರು.

ಹೈ ವೋಲ್ಟೇಜ್ ಕ್ಷೇತ್ರ :ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಂಜುನಾಥ್ ಅವರನ್ನು ಕಣಕ್ಕಿಳಿಸಲು ನಿನ್ನೆ ರಾತ್ರಿ ಟಿಕೆಟ್ ಘೋಷಣೆ ಮಾಡಲಾಗಿದೆ. ಕಳೆದ ಒಂದು ತಿಂಗಳಿನಿಂದಲೂ ಚರ್ಚೆಯಲ್ಲಿದ್ದ ವಿಚಾರಕ್ಕೆ ಸ್ಪಷ್ಟನೆ ದೊರೆತಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈ ವೋಲ್ಟೇಜ್ ಆಗಿ ಪರಿವರ್ತನೆಯಾಗಿದೆ.

ಡಾ.ಸಿ.ಎನ್.ಮಂಜುನಾಥ್, ನಾನು ರಾಜಕೀಯ ಮಾಡುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಹಾಲಿ ಸಂಸದ ಡಿ.ಕೆ.ಸುರೇಶ್, ರಾಜಕಾರಣಿಯನ್ನು ರಾಜಕೀಯ ದೃಷ್ಟಿಯಿಂದಲೇ ನೋಡಬೇಕು ಎಂದು ಹೇಳುವ ಮೂಲಕ ಜಿದ್ದಾಜಿದ್ದಿನ ಪೈಪೊಟಿಯ ಮುನ್ಸೂಚನೆ ನೀಡಿದ್ದಾರೆ.

RELATED ARTICLES

Latest News