ದೊಡ್ಡಬಳ್ಳಾಪುರ, ಜು.2– ನಗರದ ಹೊರವಲಯದ ಬಾಶೆಟ್ಟಹಳ್ಳಿಯ ಪೆಟ್ರೋಲ್ ಬಂಕ್ ಸಮೀಪದಲ್ಲಿ ಗೋಣಿ ಚೀಲದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್ ಬಳಿಯ ಪೊದೆಯಲ್ಲಿ ಅಪರಿಚಿತ ವ್ಯಕ್ತಿಯ ಶವವನ್ನು ಮೂಟೆ ಕಟ್ಟಿ ಎಸೆಯಲಾಗಿದೆ ಎಂದು ಸ್ಥಳಿಯರೊಬ್ಬರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಗ್ರಾಮಾಂತರ ಠಾಣೆ ಪೊಲೀಸರಿಗೆ ಅಪರಿಚಿತ ವ್ಯಕ್ತಿಯ ಮೃತದೇಹ ಕಂಡು ಬಂದಿದೆ.
ಸುಮಾರು ಹತ್ತು ಹನ್ನೆರಡು ದಿನಗಳ ಹಿಂದೆಯೇ ಕೃತ್ಯ ನಡೆದಿರುವ ಶಂಕೆ ಇದ್ದು, ಶವ ಗುರುತು ಸಿಗದಷ್ಟು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಜನವಸತಿಗಳಿರುವ ಪ್ರದೇಶದಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದೆ.
ಸ್ಥಳಕ್ಕೆ ಎಸ್ಪಿ ಸಿ.ಕೆ.ಬಾಬಾ, ಡಿವೈಎಸ್ಪಿ ರವಿ.ಪಿ, ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುರೆಸಿದ್ದಾರೆ.
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ
- ನಗರ್ತಪೇಟೆ ಅಗ್ನಿ ಅವಘಡ, ಇಬ್ಬರ ಬಂಧನ