ಆರ್‌ಜೆಡಿ ಮುಖಂಡರ ಮನೆಗಳ ಮೇಲೆ ಮುಗಿಬಿದ್ದ ಇಡಿ

Social Share

ಪಾಟ್ನಾ,ಮಾ.10- ಆರ್‌ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಪತ್ನಿ ರಾಬ್ರಿ ದೇವಿ ಭಾಗಿಯಾಗಿದ್ದಾರೆ ಎನ್ನಲಾದ ಉದ್ಯೋಗಕ್ಕಾಗಿ ಭೂಮಿ ಹಗರಣದ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು ಬಿಹಾರದ ಹಲವಾರು ನಗರಗಳಲ್ಲಿ ಶೋಧ ಕಾರ್ಯ ಹಮ್ಮಿಕೊಂಡಿದ್ದಾರೆ.

ಪಟ್ನಾ ಮತ್ತು ಫುಲ್ವಾರಿ ಷರೀಫ್‍ನಂತಹ ಪಟ್ಟಣಗಳಲ್ಲಿ ರಾಷ್ಟ್ರೀಯ ಜನತಾ ದಳದೊಂದಿಗೆ ಸಂಪರ್ಕ ಹೊಂದಿರುವ ಕೆಲವು ನಾಯಕರ ಮೇಲೆ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣವು ಯಾದವ್ ಕುಟುಂಬ ಮತ್ತು ಅದರ ಸಹಚರರಿಗೆ ಭೂಮಿ ಪಾರ್ಸೆಲ್‍ಗಳನ್ನು ಉಡುಗೊರೆಯಾಗಿ ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡುವುದಕ್ಕೆ ಪ್ರತಿಯಾಗಿ ರೈಲ್ವೆಯಲ್ಲಿ ಉದ್ಯೋಗವನ್ನು ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಯ ಸಂಕೇತ : ಮೋದಿ

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ ಮತ್ತು ಮಾರ್ಚ್‍ನಲ್ಲಿ ಎಲ್ಲಾ 15 ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸಿತ್ತು.

ಜಂತರ್‌ಮಂತರ್‌ನಲ್ಲಿ ಕೆ.ಕವಿತಾ ಉಪವಾಸ ಸತ್ಯಾಗ್ರಹ

ಮನಿ ಲಾಂಡರಿಂಗ್ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‍ಗಳ ಅಡಿಯಲ್ಲಿ ಸಿಬಿಐ ಜಾರಿ ನಿರ್ದೇಶನಾಲಯಕ್ಕೆ ನೀಡಿರುವ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಈ ದಾಳಿ ಸಂಘಟಿಸಿದ್ದಾರೆ ಎಂದು ತಿಳಿದುಬಂದಿದೆ.

ED, conducting, raids, across Bihar, including, RJD leaders, homes,

Articles You Might Like

Share This Article