ಮೈಸೂರಿನ ಮುಡಾ ಕಚೇರಿ ಹಾಗೂ ಹಗರಣದ ಆರೋಪಿ ದೇವರಾಜು ಮನೆ ಮೇಲೆ ಇಡಿ ದಾಳಿ

ಬೆಂಗಳೂರು,ಆ.18– ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಜಾರಿ ನಿರ್ದೇಶನಾಲಯ ಇಂದು ಎರಡು ಕಡೆ ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲಿಸಿದ್ದು, ಸಂಬಂಧಪಟ್ಟವರ ವಿಚಾರಣೆ ಆರಂಭಿಸಿದೆ.ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯದ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಇಂದು ಮೈಸೂರಿನ ಮುಡಾ ಕಚೇರಿ ಹಾಗೂ ಕೆಂಗೇರಿಯಲ್ಲಿರುವ ಜಮೀನಿನ ಮಾಲೀಕ 4ನೇ ಆರೋಪಿ ದೇವರಾಜು ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ … Continue reading ಮೈಸೂರಿನ ಮುಡಾ ಕಚೇರಿ ಹಾಗೂ ಹಗರಣದ ಆರೋಪಿ ದೇವರಾಜು ಮನೆ ಮೇಲೆ ಇಡಿ ದಾಳಿ