Sunday, May 19, 2024
Homeರಾಜ್ಯಕಲಿತವರು, ತಿಳಿದವರೇ ಮತದಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ : ಹೊರಟ್ಟಿ

ಕಲಿತವರು, ತಿಳಿದವರೇ ಮತದಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ : ಹೊರಟ್ಟಿ

ಹುಬ್ಬಳ್ಳಿ, ಮೇ 7- ಪ್ರಜಾಪ್ರಭುತ್ವದಲ್ಲಿ ಕಲಿತವರು, ತಿಳಿದವರೇ ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ಬಗ್ಗೆ ಕೇಂದ್ರ ಚುನಾವಣೆ ಆಯೋಗ ಮುಂದಾಗಬೇಕೆಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ನಗರದ ಲ್ಯಾಮಿಂಗ್ಟನ್‌ ರಸ್ತೆಯಲ್ಲಿನ ಮತಗಟ್ಟೆ ಸಂಖ್ಯೆ 119ಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಅವರು ಮತದಾನ ಮಾಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತವನ್ನು ಚಲಾವಣೆ ಮಾಡಿದ್ದೇನೆ. ಆದರೆ ಬಹಳಷ್ಟು ಜನರು ಮತದಾನ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಚುನಾವಣೆ ಕೇವಲ ಟೀಕೆ ಟಿಪ್ಪಣಿಗಳಿಗೆ ಸೀಮಿತವಾಗಿದೆ. ಜನರ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಅಸಮಾಧಾನಗೊಂಡರು.

RELATED ARTICLES

Latest News