Friday, May 3, 2024
Homeರಾಜ್ಯಬಿ.ಎಲ್.ಶಂಕರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಿ । ಮಲೆನಾಡು-ಕರಾವಳಿ ಒಕ್ಕೂಟ ಆಗ್ರಹ

ಬಿ.ಎಲ್.ಶಂಕರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಿ । ಮಲೆನಾಡು-ಕರಾವಳಿ ಒಕ್ಕೂಟ ಆಗ್ರಹ

ಬೆಂಗಳೂರು, ಜ.31- ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ಎಲ್. ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಮಲೆನಾಡು ಕರಾವಳಿ ಒಕ್ಕೂಟ ಆಗ್ರಹಿಸಿದೆ.ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ, ಕಾಂಗ್ರೆಸ್ ವಕ್ತಾರ, ಸುೀರ್ ಮುರೋಳಿ ಅವರು,
ಬಿ.ಎಲï. ಶಂಕರ್ ಹಿರಿಯ ರಾಜಕಾರಣಿಯಾಗಿದ್ದು, ಅವರು ಉತ್ತಮ ವಾಗ್ಮಿಯಾಗಿದ್ದಾರೆ.

ಈ ಹಿಂದೆ ಜನಮೆಚ್ಚುವ ಸಭಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದ ಯಾವುದೇ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು. ಈಗಿರುವ ಮಲೆನಾಡು, ಕರಾವಳಿ ಭಾಗದ ಸಂಸದರಾದ ಶೋಭಾ ಕರಂದ್ಲಾಜೆ, ರಾಘವೇಂದ್ರ ಅವರು ಯಾವುದೇ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.

ಕಸ್ತೂರಿ ರಂಗನ್ ವರದಿ ಸಮಸ್ಯೆ ಕುರಿತಂತೆ ಸಮರ್ಥವಾಗಿ ಬಗೆಹರಿಸುವಲ್ಲಿ ವಿಫಲಗೊಂಡಿದ್ದಾರೆ. ಹಾಗಾಗಿ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗೆಹರಿಸಲು ಬಿ.ಎಲï.ಶಂಕರ್ ಸಮರ್ಥ ವ್ಯಕ್ತಿಯಾಗಿದ್ದಾರೆ. ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕು ಎಂದರು.

ಸರ್ಕಾರದ ಅಧಿಕಾರಿಗಳು ಸಂವಿಧಾನ ಮತ್ತು ಜಾತ್ಯತೀತತೆಗೆ ಬದ್ಧರಾಗಿರಬೇಕು : ಡಿಕೆಶಿ ವಾರ್ನಿಂಗ್

ಮಲೆನಾಡು ಕರಾವಳಿ ಭಾಗದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅನೇಕ ಸಂದರ್ಭಗಳಲ್ಲಿ ಸರ್ಕಾರ ವಿಫಲಗೊಂಡಿವೆ. ಮಲೆನಾಡು ಕರಾವಳಿ ಭಾಗದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ತುಳುನಾಡು ಆಕಾಡೆಮಿ ಆಗುವ ಅವಶ್ಯಕತೆ ಇದೆ. ಜತೆಗೆ ಮಲೆನಾಡಿನಲ್ಲಿ ಆನೆಗಳ ಹಾವಳಿ ಸಮಸ್ಯೆಯಿಂದ ರೈತರು ನಲುಗಿ ಹೋಗಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಬೇಕಾದರೆ ಬಿ.ಎಲ್ .ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಹೇಳಿದರು.

ಭಾರತದ ರಾಷ್ಟ್ರಧ್ವಜ ಹಾರಿಸಿದರೆ ಅದನ್ನು ಸಿ.ಟಿ.ರವಿ ಅವರು ತಾಲಿಬಾನ್ ಧ್ವಜವೆಂದು ಹೇಳುವುದು ಸರಿಯಲ್ಲ. ಧ್ವಜ ಹಾರಿಸುವ ವಿಚಾರ ಇಟ್ಟುಕೊಂಡು ಬಿಜೆಪಿಯವರು ಗಲಭೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಅನಿಲ್ ಹೊಸಕೊಪ್ಪ, ಹಸಗೋಡು ನಾಗೇಶ್, ನವೀನ್ ಉಪಸ್ಥಿತರಿದ್ದರು.

RELATED ARTICLES

Latest News