ಚುನಾವಣಾ ಆಯೋಗವೇ ಬಿಎಲ್‍ಒಗಳನ್ನು ನೇಮಕ ಮಾಡಲಿ

Social Share

ಬೆಂಗಳೂರು,ನ.29- ಕೇಂದ್ರ ಚುನಾವಣಾ ಆಯೋಗವೇ ಬೂತ್ ಮಟ್ಟದ ಅಧಿಕಾರಿ(ಬಿಎಲ್‍ಒ)ಗಳನ್ನು ನೇಮಕ ಮಾಡಿದರೆ, ನಮ್ಮ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹೇಳಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅಮೃತ್ ರಾಜ, ಚುನಾವಣೆ ಪ್ರಕ್ರಿಯೆ ಆರಂಭದಿಂದಲೂ ನಮ್ಮ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಜತೆಗೆ, ನಮಗೆ ನೀಡುವ ಗೌರವಧನವೂ ತೀರ ಕಡಿಮೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರವೇ ಬಿಎಲ್‍ಒಗಳನ್ನು ನೇಮಿಸಲಿ ಎಂದರು.

ಇನ್ನೂ, ಬಿಬಿಎಂಪಿ ಅಧಿಕಾರಿಗಳ ಸಹಿ ನಕಲು ಮಾಡಿ ಬಳಕೆ ಮಾಡಿದೆ ಎಂದ ಅವರು, ಬಿಬಿಎಂಪಿ ನೀಡಿರುವ ದೂರಿನನ್ವಯ ಕಂದಾಯಾಧಿಕಾರಿಗಳನ್ನು ರೆಪ್ರೆಸೆಂಟೇಷನ್ ಆಫ್ ಪಬ್ಲಿಕ್ ಆಕ್ಟ ಪ್ರಕಾರ ಏಕಾಏಕಿ ಬಂಧಿಸಿರುವುದು ಸೂಕ್ತವಲ್ಲ ಎಂದರು.

ಚಿಲುಮೆ ಸಂಸ್ಥೆ ಮೇಲೆ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಮತ್ತು ಸಿಇಒ ನಡೆಸುವ ತನಿಖೆಗೆ ಸಿದ್ದವಿದ್ದು ಅವರಿಗೆ ಮಾನಸಿಕವಾಗಿ ಹಿಂಸೆ ನೀಡಬಾರದು ಮನವಿ ಮಾಡಿದರು. ಸಂಘವನ್ನು ಪ್ರತಿನಿಧಿಸಿದ ಹಿರಿಯ ವಕೀಲ ಶ್ರೀನಿವಾಸ್ ಮಾತನಾಡಿ, ರೆಪ್ರೆಸೆಂಟೇಷನ್ ಆಫ್ ಪಬ್ಲಿಕ್ ಆಕ್ಟ ಪ್ರಕಾರ ಬಿಬಿಎಂಪಿ ದೂರು ದಾಖಲಿಸಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಅಧಿಕಾರಿ ದೂರು ದಾಖಲಿಸಬೇಕು. ಇಲ್ಲಿ ಕಾನೂನು ಪ್ರಕ್ರಿಯೆ ಸೂಕ್ತವಾಗಿಲ್ಲ ಎಂದು ತಿಳಿಸಿದರು.

ಚಿಲುಮೆ ಸಂಸ್ಥೆ ಬಿಎಲ್‍ಒ ಗುರುತಿನ ಚೀಟಿಯನ್ನು ನಕಲಿ ಮಾಡಿ ಅಕ್ರಮ ಎಸಗಿದ್ದಾರೆ ಎಂದರು.
ದತ್ತಾಂಶ ಕಳುವ ಪ್ರಕರಣದಲ್ಲಿ ಚಿಲುಮೆ ಸಂಸ್ಥೆ ಭಾಗಿಯಾಗಿರುವ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತದಾರರ ಪಟ್ಟಿಯಲ್ಲಿ ದತ್ತಾಂಶ ಕಳುವು ಮತ್ತು ಮತದಾರರನ್ನು ತೆಗೆದು ಹಾಕಿರುವ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿ ಅಧಿಕಾರಿಗಳನ್ನು ಬಂಧಿಸುತ್ತಿರುವುದು ಸೂಕ್ತವಲ್ಲ.

ಬಿಬಿಎಂಪಿ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಮತ್ತು ಪುನರಾವರ್ತನೆಯಾಗಿರುವ ಹೆಸರುಗಳನ್ನು ಮಾತ್ರ ತೆಗೆದು ಹಾಕಲಾಗಿದೆ ಎಂದುವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಜಿ.ರವಿ, ಎಸ್.ಜಿ. ಸುರೇಶ್, ಸಾಯಿಶಂಕರ್, ರಾಮಚಂದ್ರ, ಕೆ.ಮಂಜೇಗೌಡ, ಸಂತೋಷ್ ಕುಮಾರ್ ನಾಯಕ್, ರುದ್ರೇಶ್, ನರಸಿಂಹ ಸೂರ್ಯಕುಮಾರಿ, ಬಾಬಣ್ಣ ಮತ್ತಿತರರು ಪಾಲ್ಗೊಂಡಿದ್ದರು.

Election, Commission, appoint, BLO, BBMP, Employees, Welfare, Association,

Articles You Might Like

Share This Article