ನವದೆಹಲಿ,ಡಿ.18- ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ನಿನ್ನೆ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವಂತೆ ಆಯಿತು ಎಂದರು.
ಸಂವಿಧಾನವನ್ನು ಅಳವಡಿಸಿಕೊಂಡ 75 ವರ್ಷಗಳ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಭಾಷಣ ಮಾಡಿದ ಅವರು, ಸಂವಿಧಾನ ನನಗೆ ಎಲ್ಲವನ್ನೂ ಕೊಟ್ಟಿದೆ. ಒಬ್ಬ ಬಡ ರೈತನ ಮಗನಾಗಿ, ದೂರದ ಹಳ್ಳಿಯಿಂದ ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಲು ಸಾಧ್ಯವಾಗಿದ್ದರೆ ಅದು ನಮ ಸಂವಿಧಾನದಿಂದ ಮಾತ್ರ ಎಂದರು.
ಕಳೆದ 75 ವರ್ಷಗಳ ಅವಧಿಯಲ್ಲಿ ಸಂವಿಧಾನದ ಚೌಕಟ್ಟಿನಲ್ಲಿ ಭಾರತದ ಬೆಳೆದ ರೀತಿ, ಮಾಡಿದ ಸಾಧನೆಗಳ ಬಗ್ಗೆ ಅನೇಕ ಮಹತ್ವಪೂರ್ಣ ಅಂಶಗಳನ್ನು ಸದನದಲ್ಲಿ ಹಂಚಿಕೊಂಡರು. ಆಧುನಿಕ ಭಾರತವನ್ನು ರೂಪಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿಯ ಸಂವಿಧಾನ ಅಸಾಧಾರಣ ಕೊಡುಗೆ ನೀಡಿದೆ. ಬಾಬಾ ಸಾಹೇಬ್ ಅವರ ನೇತೃತ್ವದಲ್ಲಿ ರಚನೆಯಾದ ನಮ ಸಂವಿಧಾನವು ಅನೇಕ ಒತ್ತಡಗಳು ಮತ್ತು ನಮ ಕಾಲದ ರಾಜಕೀಯವನ್ನು ತಡೆದುಕೊಂಡು ನಿಂತಿದೆ ಎಂದು ಅವರು ಹೇಳಿದರು.
ಸಂವಿಧಾನದ ಮೇಲಿನ ಚರ್ಚೆಯ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಸಂದರ್ಭವನ್ನು ನೆನಪು ಮಾಡಿಕೊಂಡ ಮಾಜಿ ಪ್ರಧಾನಿಗಳು, ತುರ್ತು ಪರಿಸ್ಥಿತಿಯ ಕಾಲ ಕರಾಳ ಅವಧಿ. ಐವತ್ತು ವರ್ಷಗಳ ಹಿಂದೆ ತುರ್ತು ಪರಿಸ್ಥಿತಿಯನ್ನು ಘೋಷಿಸಿದಾಗ, ಈ ರಾಷ್ಟ್ರದ ಬಹುತೇಕ ರಾಜಕೀಯ ವಿರೋಧಿಗಳೆಲ್ಲರೂ ಜೈಲು ಪಾಲಾದರು. ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದ ಎಲ್ಲರನ್ನೂ ಜೈಲಿಗೆ ಕಳುಹಿಸಲಾಯಿತು ಎಂದು ಅವರು ಹೇಳಿದರು.
ನನ್ನನ್ನೂ ಜೈಲಿಗೆ ಕಳುಹಿಸಲಾಯಿತು. ನನ್ನ ಸೆರೆವಾಸವು ನನ್ನ ತಂದೆಯ ಮೇಲೆ ನಕಾರಾತಕ ಪರಿಣಾಮ ಬೀರಿ ಕುಟುಂಬದ ಮೇಲೆ ಮಾನಸಿಕ ಒತ್ತಡ ಉಂಟು ಮಾಡಿತು. ಕೊನೆಗೆ ಆ ನೋವಿನಲ್ಲಿಯೇ ತಂದೆಯವರು ವಿಧಿವಶರಾದರು. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಮತ್ತು ತಮ ರಾಜಕೀಯ ನಂಬಿಕೆಗಳ ಜತೆ ನಿಂತಿದ್ದ ಅನೇಕರಿಗೆ ಇದು ಆಘಾತಕಾರಿ ಸಮಯವಾಗಿತ್ತು ಎಂದು ದೇವೇಗೌಡರು ಭಾವುಕರಾಗಿ ಹೇಳಿದರು.
ತುರ್ತು ಪರಿಸ್ಥಿತಿ ಅವಧಿಯಲ್ಲಿ ಭಾರತ ಅನೇಕ ಪಾಠಗಳನ್ನು ಕಳಿತುಕೊಂಡಿತು. ಆ ಸಮಯದಲ್ಲಿಯೇ ರಾಷ್ಟ್ರವು ಸಂವಿಧಾನವು ನಮಗೆ ನೀಡಿದ ಸ್ವಾತಂತ್ರ್ಯ ಎಂತಹುದು ಎಂಬುದನ್ನು ಅರಿತುಕೊಂಡಿತು ಎಂದ ಮಾಜಿ ಪ್ರಧಾನಿಗಳು, ಯುವ ಪೀಳಿಗೆಯು ಪ್ರಜಾಪ್ರಭುತ್ವವನ್ನು ಸಂರಕ್ಷಿಸಲು ತುರ್ತು ಪರಿಸ್ಥಿತಿ ಸಮಯದಲ್ಲಿ ಅನೇಕರು ಮಾಡಿದ ತ್ಯಾಗವನ್ನು ಸರಿಸಬೇಕೆಂದು ಮನವಿ ಮಾಡಿದರು.
ನಮ ಸಂವಿಧಾನ ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದು. ಅಂತಹ ಮಹೋನ್ನತ ಸಂವಿಧಾನವನ್ನು ನಾವು ಹೊಂದಿದ್ದೇವೆ. ಇದರ ಸಂರಚನೆ ನಮ ವೈವಿಧ್ಯತೆ ಮತ್ತು ಒಕ್ಕೂಟ ವ್ಯವಸ್ಥೆಯ ರಚನೆಯನ್ನು ಗುರುತಿಸುವಾಗ ಪ್ರಜಾಪ್ರಭುತ್ವದ ವಿವಿಧ ಸಾಂಸ್ಥಿಕ ಸ್ತಂಭಗಳ ನಡುವೆ ಅಧಿಕಾರದ ಸಮತೋಲನವನ್ನು ಸಂವಿಧಾನವು ಅತ್ಯಂತ ಬಲವಾಗಿ ಎತ್ತಿ ಹಿಡಿದಿದೆ ಎಂದು ಅವರು ಹೇಳಿದರು.
1977ರ ನಂತರ ಭಾರತದಲ್ಲಿ ಸಮಿಶ್ರ ಸರ್ಕಾರಗಳ ಯಶಸ್ಸು ಸಂವಿಧಾನದ ಸಧೃಢತೆಗೆ ಹಿಡಿದ ಕನ್ನಡಿ ಎಂದ ಅವರು, ನಾನು ಮೊದಲ ಬಾರಿಗೆ 13 ಪಕ್ಷಗಳ ಒಕ್ಕೂಟವನ್ನು ಮುನ್ನಡೆಸಿದ್ದೇನೆ. ಆ ಸರ್ಕಾರದ ಆರ್ಥಿಕ ಸಾಧನೆಯ ಪ್ರಜಾಪ್ರಭುತ್ವದೆಡೆಗಿನ ಹೆಗ್ಗುರುತುಗಳನ್ನು ಗಮನಿಸಿದರೆ ನಮ ಸಂವಿಧಾನದ ಶಕ್ತಿ ಎಂತದ್ದು ಎನ್ನುವುದು ಅರ್ಥವಾಗುತ್ತದೆ. ನಾನು ಅನುಸರಿಸಿದ ಸರಳ ನಿಯಮವೆಂದರೆ, ನೀವು ಸಂವಿಧಾನವನ್ನು ನಿಕಟವಾಗಿ ಮತ್ತು ನಿಷ್ಠೆಯಿಂದ ಅನುಸರಿಸಿದರೆ, ನಾವು ದೊಡ್ಡ ತಪ್ಪುಗಳನ್ನು ತಪ್ಪಿಸಬಹುದು ಎಂದರು.
ಸಂವಿಧಾನದ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯಲು ನಿರಂತರ ಪ್ರಯತ್ನಗಳು ನಡೆಯಬೇಕು ಎಂದು ಕರೆ ನೀಡಿದ ಅವರು, ಇಂತಹ ಪ್ರಯತ್ನವನ್ನು ನಾವು ಎಂದಿಗೂ ಕೈಬಿಡಬಾರದು ಹಾಗೂ ಸಂವಿಧಾನಕ್ಕೆ ಕೊಡುಗೆ ನೀಡಿದ ಡಾ.ಅಂಬೇಡ್ಕರ್ ಮತ್ತು ಇತರರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ನಾವು ನಮ ಸಂವಿಧಾನ ಅಳವಡಿಸಿಕೊಂಡ ಶತಮಾನೋತ್ಸವವನ್ನು ಆಚರಿಸೋಣ ಮತ್ತು ಈ ರಾಷ್ಟ್ರದ ಭವ್ಯ ಭವಿಷ್ಯದಲ್ಲಿ ಅದರ ಅನೇಕ ಶತಮಾನಗಳನ್ನು ಆಚರಿಸೋಣ ಎಂದು ಅವರು ಕರೆ ನೀಡಿದರು.