ಪಕ್ಷದಲ್ಲಿ ಕೆಲಸ ಮಾಡದವರನ್ನು ಕಿತ್ತುಹಾಕಿ : ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸೋಮಣ್ಣ ಸಲಹೆ

ಬೆಂಗಳೂರು,ಜೂ.22- ಇನ್ನು ಮುಂದಾದರೂ ಪಕ್ಷದಲ್ಲಿ ಕೆಲಸ ಮಾಡುವವರನ್ನು ಗುರುತಿಸಿ, ಸಂಘಟನೆ ಮಾಡದೆ ಇರುವವರನ್ನು ನಿರ್ದಾಕ್ಷಿಣ್ಯವಾಗಿ ಕಿತ್ತು ಹಾಕಬೇಕೆಂದು ಕೇಂದ್ರ ಸಚಿವ ವಿ.ಸೋಮಣ್ಣ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರಗೆ ವೇದಿಕೆಯಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದ ಪ್ರಸಂಗ ಜರುಗಿತು. ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲಸ ಮಾಡುವವರನ್ನು ಪಕ್ಷ ಗುರುತಿಸಬೇಕು. ಕೆಲಸವನ್ನೇ ಮಾಡದೆ ನಾಯಕರ ಹಿಂದೆ ಸುತ್ತಾಡುವವರು ಇದ್ದರೂ ಒಂದೇ ಬಿಟ್ಟರೂ ಒಂದೇ ಎಂದು ಸ್ವಪಕ್ಷೀಯರ ವಿರುದ್ಧವೇ ಕಿಡಿಕಾರಿದರು. … Continue reading ಪಕ್ಷದಲ್ಲಿ ಕೆಲಸ ಮಾಡದವರನ್ನು ಕಿತ್ತುಹಾಕಿ : ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸೋಮಣ್ಣ ಸಲಹೆ