ಸ್ಯಾನ್ಹೋಸೆ(ಅಮೆರಿಕ),ಜು.5- ಸ್ಯಾನ್ಹೋಸೆ ನಗರದ ಮೆಕನರಿ ಕನ್ವೆನ್ಷನ್ ಸೆಂಟರ್ನಲ್ಲಿ ಮೂರು ದಿನಗಳ 18ನೇ ವಿಶ್ವ ಒಕ್ಕಲಿಗ ಮಹಾಸಮೇಳನಕ್ಕೆ ಅದ್ಧೂರಿ ಚಾಲನೆ ದೊರಕಿತು.
ಸಪ್ತ ಸಾಗರದಾಚೆ ಕನ್ನಡ ಮಣ್ಣಿನ ಮಕ್ಕಳ ಸಾಂಸ್ಕೃತಿಕ ಮಹಾಸಮೇಳನವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು.
ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಮಾಜಮುಖಿ ಹಬ್ಬವಾಗಿ ರೂಪುಗೊಂಡಿರುವ ಈ ಸಮೇಳನವು ವಿಶ್ವದ ವಿವಿಧೆಡೆ ನೆಲೆಸಿರುವ ಒಕ್ಕಲಿಗ ಸಮುದಾಯದವರನ್ನು ಒಂದೆಡೆ ಸೇರಿಸಿರುವ ಅಪೂರ್ವ ಸಂಗಮವಾಗಿತ್ತು.
ವಿಶ್ವದ ವಿವಿಧ ಭಾಗಗಳಿಂದ ಆಗಮಿಸಿದ ಸಮುದಾಯದ ಸದಸ್ಯರು, ವೈವಿಧ್ಯಮಯ ಸಂಸ್ಕೃತಿ, ಪರಂಪರೆ, ಉತ್ಸವವನ್ನು ಜಗತ್ತಿಗೆ ತೋರಿಸಿದರು. ಒಕ್ಕಲಿಗರ ಸಂಸ್ಕೃತಿಯ ಬಣ್ಣನೆ, ಭಕ್ತಿಯ ಮೆರವಣಿಗೆ, ಸುಗ್ಗಿ ಕುಣಿತ, ದೇವರ ಉತ್ಸವ, ಕೋಲಾಟ, ವೇಷ ಭೂಷಣಗಳ ಪ್ರದರ್ಶನಗಳು ಸ್ಯಾನ್ಹೋಸೆ ರಸ್ತೆಗಳಲ್ಲಿ ಜಾತ್ರಾ ಉತ್ಸವದ ಅನುಭವವನ್ನು ನೀಡಿದವು.
ಇವು ಒಕ್ಕಲಿಗ ಸಮುದಾಯದ ಬಲವರ್ಧನೆಗೆ ಪರಸ್ಪರ ಸಹಕಾರಕ್ಕೆ ನಾಂದಿಯಾಗಿವೆ. ಅಮೆರಿಕದ ವಿವಿಧ ರಾಜ್ಯಗಳು ಹಾಗೂ ಇತರ ದೇಶಗಳಿಂದ ಸಾವಿರಾರು ಕುಟುಂಬಗಳು ಭಾಗವಹಿಸಿದ್ದ ಈ ಸಮೇಳನ, ವಿದೇಶಿ ನೆಲದಲ್ಲಿ ಸಮುದಾಯದ ಹೆಗ್ಗಳಿಕೆಯನ್ನು ಅನಾವರಣಗೊಳಿಸಿತು. ಒಕ್ಕಲಿಗ ಸಮಾಜ ಜಗತ್ತಿನ ಮೂಲೆಮೂಲೆಗೂ ತಲುಪಿದೆ ಎಂಬುದನ್ನು ಸಮರ್ಥವಾಗಿ ಸಾರಿದಂತಾಗಿದೆ.
ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಒಕ್ಕಲುತನ ಮಾಡುವ ಒಕ್ಕಲಿಗರು ಇಂದು ತಮ ಜ್ಞಾನ, ಸ್ವಸಾಮರ್ಥ್ಯದಿಂದ ಸಮಾಜದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ತಮ ಜ್ಞಾನ ಭಂಡಾರದಿಂದಲೇ ಅಮೆರಿಕ, ಯೂರೋಪ್ ಸೇರಿದಂತೆ ಅನೇಕ ದೇಶಗಳಲ್ಲಿ ನೆಲೆಸಿದ್ದಾರೆ ಎಂದರು.
ತಂತ್ರಜ್ಞಾನ ಹುದ್ದೆಗಳು, ಉದ್ಯಮ, ವ್ಯವಹಾರ ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ತಾವು ನೆಲೆಸಿರುವ ದೇಶ ಮತ್ತು ತಾಯ್ನಾಡು ಭಾರತಕ್ಕೆ ತಮದೇ ಆದ ಮಹತ್ವದ ಕೊಡುಗೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.
ತಮ ಊರಿನಿಂದ ಸಾವಿರಾರು ಕಿ.ಮೀ. ದೂರದ ಊರಿಗೆ ಬಂದಿದ್ದರೂ ಸಮುದಾಯ ಮತ್ತು ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ, ಗೌರವವನ್ನು ಉಳಿಸಿ ಬೆಳೆಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ. ಇದು ಸಾಮಾನ್ಯ ಸಮೇಳನವಲ್ಲ. ಸಮುದಾಯ
ಮತ್ತು ಸಂಸ್ಕೃತಿಯನ್ನು ಒಗ್ಗೂಡಿಸಿ ಅಭಿವೃದ್ಧಿಗೆ ಕೊಡುಗೆ ನೀಡುವ ವಿಶೇಷ ಸಂದರ್ಭವಾಗಿದೆ ಎಂದು ಶ್ರೀಗಳು ಬಣ್ಣಿಸಿದರು.
ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಸಂಸ್ಕೃತಿ, ಕಲೆ, ಪರಂಪರೆಯ ಪ್ರದರ್ಶನದ ಜೊತೆಗೆ ವ್ಯಾಪಾರ ಉದ್ಯಮ ಸ್ಥಾಪನೆ, ವಿಸ್ತರಣೆ, ಸ್ಟಾರ್ಟಪ್ ಐಡಿಯಾಗಳು, ನೆಟ್ವರ್ಕಿಂಗ್, ಅಮೆರಿಕದಲ್ಲಿರುವ ಹೊಸ ಅವಕಾಶಗಳನ್ನು ಬಳಸಿಕೊಂಡು ಅಭಿವೃದ್ಧಿ ಕಾಣಲು ಈ ಸಮೇಳನ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಅಮೆರಿಕದಲ್ಲಿ ನೆಲೆಸಿರುವವರು, ಕರ್ನಾಟಕ ಸೇರಿದಂತೆ ಜಗತ್ತಿನ ನಾನಾ ಭಾಗಗಳಿಂದ ಆಗಮಿಸಿರುವವರು ಇದರ ಸಂಪೂರ್ಣ ಪ್ರಯೋಜನ ಪಡೆದು ಮತ್ತಷ್ಟು ಅಭಿವೃದ್ಧಿ ಕಾಣುವ ವಿಶ್ವಾಸವಿದೆ ಎಂದು ಹೇಳಿದರು.
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ಈ ಸಮೇಳನದಲ್ಲಿ ಭಾಗವಹಿಸಲು ನನಗೆ ಸಂತೋಷವಾಯಿತು. ಅಮೆರಿಕದಲ್ಲಿ ಒಕ್ಕಲಿಗ ಸಮುದಾಯದವರು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿ ನಮ ಸಂಸ್ಕೃತಿ, ಕಲೆ, ಪರಂಪರೆಯ ಪ್ರದರ್ಶನದ ಜೊತೆಗೆ ಉದ್ಯಮ ಅವಕಾಶಗಳು, ಬೆಳವಣಿಗೆ ಕುರಿತು ಚರ್ಚಿಸುವುದು ನಿಜಕ್ಕೂ ಶ್ಲಾಘನೀಯ. ಯಾವುದೇ ಸಮುದಾಯವಾಗಲಿ ಒಗ್ಗಟ್ಟಿನಿಂದ ಯಾವ ರೀತಿ ಅಭಿವೃದ್ಧಿ ಕಾಣಬಹುದು ಎನ್ನುವುದಕ್ಕೆ ಈ ಸಮೇಳನ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ವಿಶ್ವ ಒಕ್ಕಲಿಗ ಪರಿಷತ್ಆಫ್ಅಮೆರಿಕ ಅಧ್ಯಕ್ಷ ಧನಂಜಯ್ ಕೆಂಗಯ್ಯ ಮಾತನಾಡಿ, ಅಮೆರಿಕದಲ್ಲಿ ಒಕ್ಕಲಿಗರ ಸಮೇಳನ ಆಯೋಜನೆಯೇ ಒಂದು ಹೆಮೆಯ ಸಂಗತಿ. ಮೂಲತಃ ಕೃಷಿಕರಾಗಿರುವ ಒಕ್ಕಲಿಗ ಸಮುದಾಯದವರು ಇಂದು ಜಗತ್ತಿನ ಮೂಲೆ ಮೂಲೆಯಲ್ಲಿದ್ದಾರೆ. ಅಮೆರಿಕದಲ್ಲಿ ದೊಡ್ಡ ಸಂಖ್ಯೆಯಲ್ಲಿರುವ ಒಕ್ಕಲಿಗರು ಒಂದೆಡೆ ಸೇರುವುದರಿಂದ ಬೆಳವಣಿಗೆಗೆ ಇನ್ನಷ್ಟು ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ಈ ಸಮೇಳನವನ್ನು ಮತ್ತಷ್ಟು ವಿಸ್ತಾರಗೊಳಿಸುವ ಉದ್ದೇಶವಿದೆ ಎಂದು ಹೇಳಿದರು.
ಸಂಸದ ಡಾ.ಕೆ.ಸುಧಾಕರ್, ಶಾಸಕರಾದ ಎಸ್.ಟಿ. ಸೋಮಶೇಖರ್, ಸತೀಶ್ ರೆಡ್ಡಿ, ಗುಬ್ಬಿ ಶ್ರೀನಿವಾಸ್, ಅಕ್ಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಅಮರನಾಥಗೌಡರು, ಒಕ್ಕಲಿಗ ಸಮುದಾಯದ ಮುಖಂಡ ಸಚ್ಚಿದಾನಂದ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.
- ಸಪ್ತ ಸಾಗರದಾಚೆ ಕನ್ನಡನಾಡಿನ ಒಕ್ಕಲಿಗ ಸಂಸ್ಕೃತಿ-ಪರಂಪರೆಯ ಅದ್ಭುತ ಪ್ರದರ್ಶನ
- ಮಂಗಳೂರು : ಯುವತಿಯನ್ನು ದೈಹಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್
- ಆರೋಪಿಯ ವಿಚಾರಣೆ ವೇಳೆ ರಾಜಕೀಯ ನಾಯಕರ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
- ಪ್ರೀತಿ ವಿಷಯಕ್ಕೆ ಶಿಕ್ಷಕಿಯನ್ನು ಇರಿದು ಕೊಂದ ಯುವಕ
- ಲವ್ ಜಿಹಾದ್ ಮಾಸ್ಟರ್ ಮೈಂಡ್ ಕಾಂಗ್ರೆಸ್ ಕೌನ್ಸಿಲರ್ ವಿರುದ್ಧ ಪ್ರಕರಣ ದಾಖಲು