ರಾಜ್ಯದ ಅಣೆಕಟ್ಟೆಗಳ ಸುರಕ್ಷತೆಗೆ ತಜ್ಞರ ಸಮಿತಿ ರಚನೆ

ಬೆಂಗಳೂರು,ಆ.12- ತುಂಗಭದ್ರಾ ಅಣೆಕಟ್ಟೆಯ ಕ್ರಸ್ಟ್ಗೇಟ್ ಒಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟೆಗಳಲ್ಲೂ ಸುರಕ್ಷತಾ ಕ್ರಮಗಳ ಪರಿಶೀಲನೆಗಾಗಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಜಲಸಂಪನೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ನಾಳೆ ಡ್ಯಾಂ ಪರಿಶೀಲನೆಗೆ ಭೇಟಿ ನೀಡಲಿದ್ದಾರೆ ಎಂದರು.ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ಗೇಟ್ ಒಡೆದುಹೋಗಿರುವ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರರ ಜೊತೆ ಚರ್ಚೆ ಮಾಡಿದ್ದೇವೆ. ವಿನ್ಯಾಸವನ್ನು ಕಳುಹಿಸಿಕೊಡಲಾಗಿದೆ. ನಾಲ್ಕೈದು ದಿನಗಳಲ್ಲೇ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. 50-60 ಟಿಎಂಸಿ ನೀರನ್ನು ಉಳಿಸಿ … Continue reading ರಾಜ್ಯದ ಅಣೆಕಟ್ಟೆಗಳ ಸುರಕ್ಷತೆಗೆ ತಜ್ಞರ ಸಮಿತಿ ರಚನೆ