ನವದೆಹಲಿ, ಸೆ. 20- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರತೊಡಗಿವೆ.ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸ್ಥಳಾಂತರ ಮಾಡಲಾಗಿದೆ.
ಶಾಲೆಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದಿಂದ ಪರಿಶೀಲನೆ ಮಾಡಲಾಗುತ್ತಿದೆ.ಡಿಪಿಎಸ್ ದ್ವಾರಕಾ ಹಾಗೂ ನಜಾಫ್ ಗಡ, ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಹಾಗೂ ಸರ್ವೋದಯ ವಿದ್ಯಾಲಯ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿವೆ.
ಪರೀಕ್ಷೆಗಳ ಸಮಯದಲ್ಲಿ ಬಾಂಬ್ ಬೆದರಿಕೆ ಕರೆ ಹಲವು ಅನುಮಾನಗಳಿಗೂ ಕಾರಣವಾಗಿದೆ.ಕಳೆದ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಕರೆ ದೆಹಲಿಯ ಶಾಲೆಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಬರುತ್ತಿವೆ. ಕಳೆದ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿವೆ.
ಸದ್ಯ ದೆಹಲಿ ಪೊಲೀಸರಿಗೆ ಈ ಬಾಂಬ್ ಬೆದರಿಕೆ ಸಂದೇಶಗಳು ತಲೆನೋವಾಗಿ ಪರಿಣಮಿಸಿದೆ. ್ಟಈ ವಿಚಾರವಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ನಾವು ಕ್ಯಾಂಪಸ್ನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ. ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ದೆಹಲಿ ಹೈಕೋರ್ಟ್ಗೂ ಬಾಂಬ್ ಬೆದರಿಕೆ ಬಂದಿತ್ತು. ಕೋರ್ಟ್ಗೆ ಈ ಮೇಲ್ ಮೂಲಕ ಬಂದ ಬಾಂಬ್ ಬೆದರಿಕೆ ಕೆಲಕಾಲ ತಲ್ಲಣವನ್ನುಂಟು ಮಾಡಿತ್ತು. ವಿಷಯ ತಿಳಿಯುತ್ತಿದ್ದಂತೆ ಕೋರ್ಟ್ನಿಂದ ಎಲ್ಲರನ್ನು ತೆರವುಗೊಳಿಸಲಾಗಿತ್ತು.
ಬಾಂಬ್ ನಿಷ್ಕ್ರಿಯ ದಳ, ಪೊಲೀಸರು, ಶ್ವಾನ ದಳ ಸ್ಥಳಕ್ಕೆ ದಾಡಾಯಿಸಿದ್ದವು. ಭದ್ರತಾ ಸಿಬ್ಬಂದಿ ಇಡೀ ಕೋರ್ಟ್ ಆವರಣ ಸುತ್ತುವರಿದಿದ್ದರು.ಕೋರ್ಟ್ನಲ್ಲಿದ್ದ ವಕೀಲರು ಆತಂಕದಿಂದಲೇ ಹೊರ ಬಂದರು. ಬಾಂಬ್ ನಿಷ್ಕ್ರಿಯ ದಳ, ಪೊಲೀಸರು, ಶ್ವಾನ ದಳ ಕೋರ್ಟ್ನಲ್ಲಿ ಶೋಧ ನಡೆಸಿದರು ಯಾವುದೇ ಸ್ಫೋಟಕ ಪತ್ತೆಯಾಗಲಿಲ್ಲ. ಇದರಿಂದ ವಕೀಲರು ನಿಟ್ಟಿಸಿರು ಬಿಟ್ಟಿದ್ದರು.