Friday, May 3, 2024
Homeರಾಷ್ಟ್ರೀಯಮದುವೆಯಾದ ಮರುಕ್ಷಣವೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ಮದುವೆಯಾದ ಮರುಕ್ಷಣವೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ಮೀರತ್, ಡಿ.27- ಕುಟುಂಬದವರ ವಿರೋಧವನ್ನು ಲೆಕ್ಕಿಸದೆ ವಿವಾಹದ ವಿಧಿ ವಿಧಾನ ನೆರವೇರಿಸಿಕೊಂಡ ಪ್ರೇಮಿಗಳು ನಂತರ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಬುಧನಗರ ಪ್ರದೇಶದ ರಾಖಿ ಚೌಹಾಣ್ (21) ಮತ್ತು ಉತ್ತರಾಖಂಡದ ಹರಿದ್ವಾರದ ಮನೀಶ್ ಚೌಹಾಣ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಪ್ರೇಮಿಗಳು ಇಬ್ಬರ ಮೃತದೇಹಗಳು ಇಲ್ಲಿನ ಬಹ್ಸುಮಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ರಾಖಿ ಮತ್ತು ಮನೀಶ್ ಪರಸ್ಪರ ಪ್ರೀತಿಸುತ್ತಿದ್ದರು ಆದರೆ ಅವರ ಸಂಬಂಧವನ್ನು ಅವರ ಕುಟುಂಬಗಳು ವಿರೋಸಿದ್ದವು ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ಸಂತೋಷ್ ಕುಮಾರ್ ಹೇಳಿದ್ದಾರೆ.

ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ

ರಾತ್ರಿ ಮನೀಶ್ ರಾಖಿಯನ್ನು ಭೇಟಿಯಾದರು. ಆಕೆಯ ಹಣೆಗೆ ಸಿಂಧೂರ ಹಚ್ಚಿ, ಸಿಹಿ ತಿನ್ನಿಸಿ ವಿವಾಹದ ವಿಧಿ ವಿಧಾನಗಳನ್ನು ಪೂರೈಸಿಕೊಂಡು ನಂತರ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ಹಗ್ಗದಿಂದ ಎರಡು ಕುಣಿಕೆಗಳನ್ನು ಮಾಡಿ ಒಬ್ಬರನ್ನೊಬ್ಬರು ಹಿಡಿದುಕೊಂಡು ಮರಕ್ಕೆ ನೇಣು ಹಾಕಿಕೊಂಡಿದ್ದಾರೆ ಎಂದು ಅವರು ಹೇಳಿದರು. ಸ್ಥಳದಲ್ಲಿ ಸಿಂಧೂರ ಮತ್ತು ಸಿಹಿ ಪೆಟ್ಟಿಗೆಗಳು ಪತ್ತೆಯಾಗಿವೆ ಎಂದು ಅವರು ಹೇಳಿದರು.

ಯುವನಿಧಿ ಯೋಜನೆಗೆ ಯಾರು ಅರ್ಹರು..? ನೋಂದಣಿ ಹೇಗೆ..?

ನೇಣು ಬಿಗಿದುಕೊಂಡು ಉಸಿರುಗಟ್ಟಿ ಸಾವಿಗೆ ಕಾರಣ ಎಂದು ಮರಣೋತ್ತರ ಪರೀಕ್ಷೆ ವರದಿ ದೃಢಪಡಿಸಿದೆ. ಇಬ್ಬರೂ ಬಹುತೇಕ ಒಂದೇ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.

RELATED ARTICLES

Latest News