ಉಪಚುನಾವಣೆಯಲ್ಲೂ ಕುಟುಂಬ ರಾಜಕಾರಣ, ಕಾರ್ಯಕರ್ತರು ಆಟಕ್ಕುಂಟು ಲೆಕ್ಕಕ್ಕಿಲ್ಲ

ಬೆಂಗಳೂರು,ಅ.18-ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎತ್ತ ನೋಡಿದರೂ ಕುಟುಂಬ ರಾಜಕಾರಣವೇ ಮತ್ತೆ ಮುನ್ನಲೆಗೆ ಬರುತ್ತಿದ್ದು, ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರು ಅನಾಥರಾಗುತ್ತಿದ್ದಾರೆ. ಪ್ರತಿ ಚುನಾವಣೆ ಬಂದಾಗ ಕುಟುಂಬ ರಾಜಕಾರಣವನ್ನು ವಿರೋಧಿಸುವ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕೊನೆಗೆ ಕಾರ್ಯಕರ್ತರ ಒತ್ತಡ, ಗೆಲ್ಲುವ ಅನಿವಾರ್ಯತೆ ಎಂಬ ಸಬೂಬುಗಳನ್ನು ಕೊಟ್ಟು ತಮ ಕುಟುಂಬದವರಿಗೆ ಮಣೆ ಹಾಕುತ್ತಲೇ ಬಂದಿದ್ದಾರೆ.ಇದೀಗ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೇಗೆ ನೋಡಿದರೂ ಪುನಃ ಕುಟುಂಬದ ಕುಡಿಗಳು, ಪತ್ನಿ, ಸಹೋದರರ ಹೆಸರುಗಳೇ ಗಿರಕಿ … Continue reading ಉಪಚುನಾವಣೆಯಲ್ಲೂ ಕುಟುಂಬ ರಾಜಕಾರಣ, ಕಾರ್ಯಕರ್ತರು ಆಟಕ್ಕುಂಟು ಲೆಕ್ಕಕ್ಕಿಲ್ಲ