Wednesday, May 1, 2024
Homeರಾಜ್ಯಆಧಾರ್ ಲಿಂಕ್ ನಂತರ ರೈತರಿಗೆ ಬರ ಪರಿಹಾರ : ಸಿಎಂ ಸಿದ್ದರಾಮಯ್ಯ

ಆಧಾರ್ ಲಿಂಕ್ ನಂತರ ರೈತರಿಗೆ ಬರ ಪರಿಹಾರ : ಸಿಎಂ ಸಿದ್ದರಾಮಯ್ಯ

ಕೊಪ್ಪಳ/ವಿಜಯಪುರ,ಜ.2- ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಬೇಕಿರುವು ದರಿಂದ ಬರ ಪರಿಹಾರ ಪಾವತಿ ವಿಳಂಬವಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸಕ್ಕಾಗಿ ಕೊಪ್ಪಳದ ಗಿಣಿ ಗೇರ ಏರ್‌ಸ್ಟ್ರಿಪ್‌ಗೆ ಬಂದಿಳಿದ ಮುಖ್ಯಮಂತ್ರಿಗಳು ಸುದ್ದಿಗಾರ ರೊಂದಿಗೆ ಮಾತನಾಡಿದರು.
ಬೆಳೆನಷ್ಟಕ್ಕೆ ತಾತ್ಕಾಲಿಕವಾಗಿ 2 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ. ಅದನ್ನು ಶೀಘ್ರವೇ ಪಾವತಿ ಮಾಡಲಾಗುವುದು. ಸದ್ಯಕ್ಕೆ ಖಾತೆಗಳಿಗೆ ಆಧಾರ್ ಲಿಂಕ್ ಜೋಡಣೆಯಾಗಬೇಕಿರುವುದರಿಂದ ತಡವಾಗುತ್ತಿದೆ ಎಂದು ಹೇಳಿ ನಿರ್ಗಮಿಸಿದರು.

ಇದಕ್ಕೂ ಮುನ್ನ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವೆ ಖಾಯಂಗೊಳಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ನಾನು ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ. ಅದರ ಬಳಿಕವೂ ಪ್ರತಿಭಟನೆ ಮುಂದುವರೆಸಿದ್ದಾರೆ. ಸೇವೆ ಖಾಯಂಗೊಳಿಸುವುದು ಕಷ್ಟದ ಕೆಲಸ ಎಂದರು.

ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್‍ನಲ್ಲಿ ಇಲ್ಲ: ಚೆಲುವರಾಯಸ್ವಾಮಿ

ರಾಮಮಂದಿರ ಉದ್ಘಾಟನೆಯ ದಿನ ಸರ್ಕಾರಿ ರಜೆ ಘೋಷಣೆ ಮಾಡಬೇಕೆನ್ನುವ ಘೋಷಣೆಯನ್ನು ಮುಖ್ಯಮಂತ್ರಿ ತಳ್ಳಿಹಾಕಿದರು. ಕಾರ್ಯಕ್ರಮ ಮಾಡುತ್ತಿರುವುದು ಕೇಂದ್ರ ಸರ್ಕಾರ. ಅವರೇ ಸರ್ಕಾರದ ರಜೆ ಘೋಷಣೆ ಮಾಡಲಿ ಎಂದು ತಿರುಗೇಟು ನೀಡಿದರು. ರಾಮಮಂದಿರ ಉದ್ಘಾಟನೆಗೆ ಯಾರನ್ನು ಕರೆಯಬೇಕು, ಕರೆಯಬಾರದು ಎಂಬುದು ಅವರಿಗೆ ಸಂಬಂಧಪಟ್ಟ ವಿಚಾರ. ಯಾರಿಗೆಲ್ಲಾ ಆಹ್ವಾನ ಹೋಗಿದೆ, ಹೋಗಿಲ್ಲ ಎಂಬ ಬಗ್ಗೆ ನಮಗೆ ಮಾಹಿತಿ ಇಲ್ಲ. ಆಹ್ವಾನ ಇದ್ದವರು ಹೋಗಬಹುದು, ಇಲ್ಲದೇ ಇದ್ದವರು ಗೈರುಹಾಜರಾಗುತ್ತಾರೆ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ತಪ್ಪು ಮಾಡಿದ್ದರೆ ಅವರನ್ನು ಹಾಗೆಯೇ ಬಿಟ್ಟು ಬಿಡೆಬೇಕೆ? ಎಂದು ಮರು ಪ್ರಶ್ನಿಸಿದರು. ಹಳೆಯ ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ ನೀಡಲಾಗಿದೆ. ಅದರ ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಇದರಲ್ಲಿ ದ್ವೇಷದ ರಾಜಕಾರಣವಾಗಲಿ, ನಿರಪರಾಧಿಗಳನ್ನು ಬಂಧಿಸುವುದಾಗಲೀ ನಡೆದಿಲ್ಲ ಎಂದು ಸಮರ್ಥಿಸಿಕೊಂಡರು.

ನ್ಯಾಯಾಲಯದ ನಿರ್ದೇಶನಗಳಿದ್ದರೆ ಸರ್ಕಾರ ಅದರ ಅನುಸಾರವೂ ನಡೆದುಕೊಳ್ಳಲಿದೆ ಎಂದು ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಕಾಂಗ್ರೆಸ್ ಸರ್ಕಾರ ಐಸಿಸ್ ಸರ್ಕಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‍ಜೋಷಿ ನೀಡಿದ ಹೇಳಿಕೆಗೆ ತಿರುಗೇಟು ನೀಡಿ, ಅಪರಾಧಿ ಎಂದಿಗೂ ಅಪರಾಧಿಯೇ. ಸಮಯ ಆಗಿದೆ ಎಂದಾಕ್ಷಣ ಅಪರಾಧ ಕಳೆದು ಹೋಗಿದೆ ಎಂದರ್ಥವಲ್ಲ.

ನ್ಯಾಯಾಲಯ ನಿರಪರಾಧಿ ಎಂದು ಘೋಷಿಸುವವರೆಗೂ ಅಪರಾಧ ಚಾಲ್ತಿಯಲ್ಲಿರುತ್ತದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಕಾನೂನು ಗೊತ್ತಿಲ್ಲವೇ ಎಂದು ಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಿರುಗೇಟು ನೀಡಿದರು.

ಬಾಬ್ರಿ ಮಸೀದಿ ಕಳೆದುಕೊಂಡ ಬೇಸರ ಇಲ್ಲವೇ: ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ

ಗೃಹಸಚಿವರು ಹಳೆ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕೆಂದು ಹೇಳಿದ್ದಾರೆ. ಇದರ ಪ್ರಕಾರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ವಿಳಂಬವಾದಾಕ್ಷಣ ಕ್ರಮ ಕೈಗೊಳ್ಳಬಾರದು ಎಂದಿದೆಯೇ, ಸರ್ಕಾರ ಕಾನೂನಿನ ಪ್ರಕಾರ ನಡೆದುಕೊಂಡಿದೆ. ಪ್ರಹ್ಲಾದ್ ಜೋಷಿಯೇನು ಕಾನೂನು ತಜ್ಞರಲ್ಲ ಅಥವಾ ಅವರು ನ್ಯಾಯಾಲಯವೂ ಅಲ್ಲ, ಅವರು ಹೇಳಿದ್ದೆಲ್ಲವೂ ವೇದವಾಕ್ಯವೂ ಅಲ್ಲ. ಕಾನೂನು ಪ್ರಕಾರ ಮಾತನಾಡದೇ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಅಪರಾಧಿಗಳಿಗೆ ಕುಮ್ಮಕ್ಕು ನೀಡುವ ಮೂಲಕ ಬಿಜೆಪಿಯವರು ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

Latest News