Thursday, October 24, 2024
Homeಜಿಲ್ಲಾ ಸುದ್ದಿಗಳು | District Newsಸಾಕಲಾಗದೆ ಕಂದನನ್ನು ಕೆರೆಗೆ ಎಸೆದ ಕರುಣೆಯಿಲ್ಲದ ತಂದೆ

ಸಾಕಲಾಗದೆ ಕಂದನನ್ನು ಕೆರೆಗೆ ಎಸೆದ ಕರುಣೆಯಿಲ್ಲದ ತಂದೆ

ಪಿರಿಯಾಪಟ್ಟಣ ,ಅ.10- ಸಾಕಲು ಆಗುತ್ತಿಲ್ಲವೆಂದು ಪಾಪಿ ತಂದೆಯೊಬ್ಬ ಒಂದೂವರೆ ವರ್ಷದ ಮಗುವನ್ನು ಕೆರೆಗೆ ಎಸೆದು ಕೊಲೆ ಮಾಡಿರುವ ದುರಂತ ಘಟನೆ ತಾಲೂಕಿನ ಮಾಕೋಡಿನಲ್ಲಿ ನಡೆದಿದೆ. ಹೀನ ಕೃತ್ಯ ಎಸೆಗಿರುವ ಆರೋಪಿ ತಂದೆ ಗಣೇಶ್ (30)ನನ್ನು ಪಿರಿಯಾಪಟ್ಟಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಳೆದ 2014 ರಲ್ಲಿ ಗಣೇಶ್ ಬೆಂಗಳೂರು ಸಮೀಪದ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮೀ ಎಂಬುವವರನ್ನು ಮದುವೆಯಾಗಿದ್ದ. ಆರಂಭದಲ್ಲಿ ದೇವನಹಳ್ಳಿಯಲ್ಲಿಯೆ ವಾಸವಿದ್ದ ದಂಪತಿಗೆ ಹಾರಿಕಾ ಮತ್ತು ದೀಕ್ಷಾ ಎಂಬ ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು ಕಳೆದ ಒಂದು ವರ್ಷದ ಹಿಂದೆ ಮೂರನೇ ಮಗುವಿಗೆ ಜನ್ಮ ನೀಡುವ ವೇಳೆ ಲಕ್ಷ್ಮೀ ಮೃತಪಟ್ಟಿದ್ದಾಳೆ. ನಂತರ ಮೊಮಕ್ಕಳನ್ನು ಲಕ್ಷ್ಮೀ ಪೊಷಕರೇ ಸಾಕಿ ಸಲಹಿದ್ದಾರೆ.

ಡಾಬರ್ ಉತ್ಪನ್ನಗಳ ವಿರುದ್ಧ ಅಮೆರಿಕ, ಕೆನಡಾದಲ್ಲಿ ಕೇಸ್

ಇತೀಚೆಗೆ ಹೆಣ್ಣು ಮಕ್ಕಳನ್ನು ಅಜ್ಜಿ ತಾತನ ಜೊತೆ ಬಿಟ್ಟು ಒಂದೂವರೆ ವರ್ಷದ ಮಗ ಕುಮಾರ್ ಜೊತೆ ಪಿರಿಯಾಪಟ್ಟಣ ತಾಲೂಕಿನ ಮಾಕೋಡಿಗೆ ವಾಪಸ್ ಆಗಿದ್ದ ಗಣೇಶ ಇಲ್ಲಿ ತಾಯಿಯೊಂದಿಗೆ ಮಗುವನ್ನು ಸಾಕುತ್ತಿದ್ದನು. ಹಲವು ಬಾರಿ ಮಗುವನ್ನು ನಮಗೆ ವಾಪಸ್ಸು ನೀಡಿ, ನಾವೇ ಸಾಕುವುದಾಗಿ ಅತ್ತೆ ತಿಳಿಸಿದ್ದರು. ಆದರೆ, ಅತ್ತೆಗೆ ಮಗುವನ್ನು ಒಪ್ಪಿಸಲು ನಿರಾಕರಿಸಿದ್ದ ಆದರೆ ಈಗ ಸಾಕಲು ಆಗುತ್ತಿಲ್ಲವೆಂದು ಕೆರೆಗೆ ಎಸೆದು ಕೊಂದೇ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣಾ ಪೊಲೀಸರು, ಆರೋಪಿ ಬಂಧಿಸಿದ್ದಾರೆ ಘಟನೆಯ ಬಗ್ಗೆ ತಿಳಿದು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ

RELATED ARTICLES

Latest News